ಕಲಬುರಗಿ | ಬಿಡುಗಡೆಯಾದರೂ 2 ವರ್ಷ ಜೈಲಿನಲ್ಲೇ ಇದ್ದ ಕೈದಿ; ಕಾರಣವಿದು!

Date:

Advertisements

ಸನ್ನಡತೆ ಆಧಾರದ ಮೇಲೆ 2023ರಲ್ಲಿಯೇ ಬಿಡುಗಡೆಯಾಗಿದ್ದ ಕೈದಿಯೊಬ್ಬರು, ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸಲಾಗದ ಕಾರಣ ಜೈಲಿನಲ್ಲಿಯೇ ಇದ್ದರು. ಇದೀಗ, ಅವರಿಗೆ ಜೈಲು ಅಧಿಕಾರಿಗಳು ಸಹಾಯ ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದುರ್ಗಪ್ಪ ಅವರು ಕಲಬುರಗಿ ಜಿಲ್ಲಾ ಕಾರಾಗೃಹದಲ್ಲಿದ್ದರು. ಅವರನ್ನು 2023ರ ನವೆಂಬರ್‌ನಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ಆದರೆ, ದಂಡ ಪಾವತಿಸದೆ ಜೈಲಿನಿಂದ ಹೊರಬರಲಾಗಿರಲಿಲ್ಲ. ಈಗ, ಅವರಿಗೆ ಜೈಲಧಿಕಾರಿಗಳು ಹಣದ ಸಹಾಯ ಮಾಡಿ, ದಂಡ ಪಾವತಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.

2013ರಲ್ಲಿ ಕೊಲೆ ಪ್ರಕರಣದಲ್ಲಿ ದುರ್ಗಪ್ಪ ಅವರನ್ನು ಬಂಧಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಅವರನ್ನು ಕಲಬುರಗಿ ಜೈಲಿನಲ್ಲಿ ಇರಿಸಲಾಗಿತ್ತು.

Advertisements

ಆದಾಗ್ಯೂ, ಸನ್ನಡತೆ ಆಆರದ ಮೇಲೆ 2023ರನ ನವೆಂಬರ್‌ನಲ್ಲಿ ಅವರನ್ನು ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿತ್ತು. ಆದರೆ, ಕೊಲೆ ಪ್ರಕರಣದಲ್ಲಿ ಅವರಿಗೆ ವಿಧಿಸಲಾಗಿದ್ದ 1 ಲಕ್ಷ ರೂ. ದಂಡವನ್ನು ದುರ್ಗಪ್ಪ ಪಾವತಿ ಮಾಡಿರಲಿಲ್ಲ. ಅವರ ಸಂಬಂಧಿಗಳೂ ದಂಡ ಪಾವತಿಸಿ, ಅವರನ್ನು ಕರೆದೊಯ್ಯಲು ಮುಂದೆ ಬಂದಿರಲಿಲ್ಲ. ಪರಿಣಾಮ, ಅವರು ಜೈಲಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ.

ಇದೀಗ, ಕಲಬುರಗಿ ಕೇಂದ್ರ ಕಾರಾಗೃಹ ಮುಖ್ಯ ಅಧಿಕ್ಷಕಿ ಡಾ. ಅರ್ ಅನಿತಾ ಅವರೇ ದುರ್ಗಪ್ಪಗೆ ಸಹಾಯ ಮಾಡಿದ್ದಾರೆ. ದಂಡದ ಮೊತ್ತವನ್ನು ಪಾವತಿಸಿದ್ದಾರೆ. ದುರ್ಗಪ್ಪ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X