ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

Date:

Advertisements
  • ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ
  • ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್‌ಎಸ್‌ಎಸ್‌ ನಾಯಕರ ಪಾಠ ಏಕೆ ಬೇಡಾ?: ಸಿ ಟಿ ರವಿ

ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು ಮಾಡುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ. 2009ರಲ್ಲಿ ಯುಪಿಎ ಸರ್ಕಾರ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, “ಹೆಡ್ಗೆವಾರ್​ ಪಾಠ, ಚಕ್ರವರ್ತಿ ಸೂಲಿಬೆಲೆ ಬರೆದ ಪಾಠ ವಾಪಸ್ ಪಡೆಯುವುದಾಗಿ ಹೇಳಿದೆ. ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲ ಬೆಳವಣಿಗೆಗಳನ್ನೂ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

“ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್​ ಉದ್ದೇಶಪೂರ್ವಕವಾಗಿ​ ರಾಜಕಾರಣ ಮಾಡುತ್ತಿದೆ. ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಶಾಸನದ ಆಧಾರದಲ್ಲಿ ಸರ್ಕಾರ ನಡೆಯುವುದು. ಇದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳಲಿ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ವಾಟ್ಸ್ಆ್ಯಪ್ ಯೂನಿವರ್ಸಿಟಿಯಲ್ಲಿ ಪಿಎಚ್‌ಡಿ ಮಾಡಿದವರ ಪಾಠ ನಮ್ಮ ಮಕ್ಕಳಿಗೆ ಬೇಡ: ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ ನಾಯಕರ ಪಾಠ ಯಾಕೆ ಓದಬಾರದು?: ಸಿಟಿ ರವಿ ಪ್ರಶ್ನೆ

ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್‌ಎಸ್‌ಎಸ್‌ ನಾಯಕರದ್ದು ಯಾಕೆ ಓದಬಾರದು? ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನಿಸಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್‌ ನೆರವು ಇಲ್ಲದೆ ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ” ಎಂದರು.

“ಆರ್‌ಎಸ್‌ಎಸ್‌ ವಿಚಾರದಲ್ಲಿ ನೆಹರು, ಇಂದಿರಾ ಸೋತಿದ್ದಾರೆ. ಸುಳ್ಳು ಮತ್ತು ಕಾಂಗ್ರೆಸ್ ನಾಣ್ಯದ ಎರಡು ಮುಖಗಳು. ಕಾಂಗ್ರೆಸ್ ನಾಯಕರು ಕುರ್ಚಿಗೆ ಅಂಗಲಾಚಿದ್ದರು. ಕಾಂಗ್ರೆಸ್ ನವರನ್ನು ಯಾಕೆ‌ ಅಂಡಮಾನ್ ಜೈಲಿಗೆ ಹಾಕಲಿಲ್ಲ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X