ತೆಲಂಗಾಣ: ನ್ಯಾ. ಶಮೀಮ್‌ ಅಕ್ತರ್‌ ಆಯೋಗದ ಜಾತಿಗಣತಿ ವರದಿ ವಿಧಾನಸಭೆಯಲ್ಲಿ ಮಂಡನೆ

Date:

Advertisements

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್‌ ಅಕ್ತರ್‌ ಒಳ ಮೀಸಲಾತಿ ಆಯೋಗ ಸಿದ್ಧಪಡಿಸಿರುವ ತೆಲಂಗಾಣ ಜಾತಿಗಣತಿ ವರದಿಯನ್ನು ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ.

ವರದಿ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ, “ಜನಗಣತಿಗಿಂತಲೂ ಕರಾರುವಾಕ್ಕಾಗಿ ಈ ಐತಿಹಾಸಿಕ ಸಮೀಕ್ಷೆ ನಡೆಸಲಾಗಿದೆ. ವರದಿ ದತ್ತಾಂಶಗಳನ್ನು ರಾಜ್ಯದಲ್ಲಿ ಕೈಗೊಳ್ಳುವ ವಿವಿಧ ಕಲ್ಯಾಣ ಯೋಜನೆಗಳಲ್ಲಿ ಬಳಸಿಕೊಳ್ಳಲಾಗುವುದು. ಈ ಮೂಲಕ ರಾಜ್ಯದಲ್ಲಿ ಸಾಮಾಜಿಕ-ರಾಜಕೀಯ ಬದಲಾವಣೆ ತರಲಾಗುವುದು’ ಎಂದಿದ್ದಾರೆ.

ರಾಜ್ಯದ ಶೇ.56.33ರಷ್ಟು ಮಂದಿ ಹಿಂದುಳಿದ ವರ್ಗಗಳಿಗೆ ಸೇರಿದವರೆಂದು ತಿಳಿದುಬಂದಿದ್ದು, ರಾಜಕೀಯ, ಶೈಕ್ಷಣಿಕ, ಉದ್ಯೋಗ ಕ್ಷೇತ್ರಗಳಲ್ಲಿ ಈ ವರದಿಯನ್ನು ಬಳಸಿ ಅವರಿಗೆ ಪ್ರಯೋಜನ ಕಲ್ಪಿಸಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ, ದೇಶಾದ್ಯಂತ ಜಾತಿಗಣತಿ ನಡೆಸುವಂತೆ ಕೇಂದ್ರಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

Advertisements

ಕಳೆದ ವರ್ಷದ (2024) ನವೆಂಬರ್ ಮತ್ತು ಡಿಸೆಂಬರ್‌ ತಿಂಗಳಲ್ಲಿ ನಡೆಸಿದ ಜಾತಿ ಜನಗಣತಿಯ ಪ್ರಕಾರ, ರಾಜ್ಯದ ಒಟ್ಟು ಜನಸಂಖ್ಯೆಯ ಶೇಖಡ 56.33ರಷ್ಟು ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಇದ್ದಾರೆ.

ಹಿಂದುಳಿದ ಜಾತಿಗಳಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರು ಒಳಗೊಂಡಿದ್ದಾರೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಶೇಕಡ 46.25ರಷ್ಟು ಹಿಂದುಳಿದ ಜಾತಿಯವರು ಇದ್ದಾರೆ. ಹಿಂದುಳಿದ ಮುಸ್ಲಿಮರ ಜನಸಂಖ್ಯೆ ಶೇಕಡ 10.08ರಷ್ಟಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಜನಗಣತಿಯ ವರದಿಯ ಪ್ರಕಾರ ತೆಲಂಗಾಣದ ಜಾತಿವಾರು ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗಳು – 61,84,319 (17.43%),ಪರಿಶಿಷ್ಟ ಪಂಗಡಗಳು- 37,05,929 (10.45%), ಹಿಂದುಳಿದ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 1,64,09,179 (46.25%), ಹಿಂದುಳಿದ ಜಾತಿಯ ಮುಸ್ಲಿಮರು – 35,76,588 (10.08%), ಇತರೆ ಜಾತಿಯ ಮುಸ್ಲಿಮರು – 8,80,424 (2.48%), ಇತರೆ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 13.31%, ಮುಸ್ಲಿಮರು (ಒಟ್ಟು) – 12.56%, ಇತರೆ ಜಾತಿಗಳು (ಒಟ್ಟು) – 15.79% ಇದ್ದಾರೆ ಎಂದು ರೇವಂತ್‌ ರೆಡ್ಡಿ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಕನಿಷ್ಠ 162 ಸಮುದಾಯಗಳನ್ನು ಹಿಂದುಳಿದ ಜಾತಿಗಳೆಂದು ವರ್ಗೀಕರಿಸಲಾಗಿದೆ. ಅವುಗಳನ್ನು ಎ, ಬಿ, ಸಿ, ಡಿ, ಇ ಎಂದು ಐದು ಗುಂಪುಗಳಾಗಿ ಉಪ ವರ್ಗೀಕರಣ ಮಾಡಲಾಗಿದೆ. ಇದರಲ್ಲಿ ಗುಂಪು ಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರನ್ನು ಒಳಗೊಂಡಿದೆ ಮತ್ತು ಗುಂಪು ಇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಯ ಮುಸ್ಲಿಮರನ್ನು ಒಳಗೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಜಾತಿ ಸಮೀಕ್ಷೆ ಕೂಡ ಒಂದಾಗಿತ್ತು. ಶಿಕ್ಷಣ, ಉದ್ಯೋಗ ಮತ್ತು ಕಲ್ಯಾಣ ಯೋಜನೆಗಳಲ್ಲಿ ಹಿಂದುಳಿದಿರುವ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ವಿಸ್ತರಿಸುವುದಾಗಿಯೂ ಕಾಂಗ್ರೆಸ್ ಹೇಳಿತ್ತು.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಶೇಖಡ 23 ರಿಂದ ಶೇಕಡ 42ಕ್ಕೆ ಹೆಚ್ಚಿಸುವುದಾಗಿ ಮತ್ತು ಸರ್ಕಾರಿ ನಾಗರಿಕ ನಿರ್ಮಾಣ ಮತ್ತು ನಿರ್ವಹಣಾ ಒಪ್ಪಂದಗಳಲ್ಲಿ ಶೇಖಡ 42 ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಜಾರಿಗೆ ತರುವುದಾಗಿಯೂ ಪಕ್ಷ ಭರವಸೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X