ಬೆಂಗಳೂರು | 150 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಳ್ಳನ ಬಂಧನ

Date:

Advertisements

ಬೆಂಗಳೂರಿನ ಮಡಿವಾಳ ಪ್ರದೇಶದ ಮಾರುತಿ ನಗರದಲ್ಲಿ ಮನೆಯೊಂದರಲ್ಲಿ ದರೋಡೆ ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬರೋಬ್ಬರಿ 150 ಪ್ರಕರಣಗಳಲ್ಲಿ ಆರೋಪಿಯಾಗಿರುವ ಅಂತಾರಾಜ್ಯ ಕಳ್ಳನೆಂದು ತಿಳಿದುಬಂದಿದೆ.

ಜನವರಿ 9ರಂದು ಮಾರುತಿ ನಗರದಲ್ಲಿ ದರೋಡೆ ನಡೆದಿತ್ತು. ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಳ್ಳನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ಪಂಚಾಕ್ಷರಿ ಸಂಗಯ್ಯ ಸ್ವಾಮಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ತೆಲಂಗಾಣ, ಮಹಾರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕದಲ್ಲಿ ಒಟ್ಟು 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

Advertisements

ಆರೋಪಿಯನ್ನು ಮಡಿವಾಳದ ಮಾರುಕಟ್ಟೆ ಪ್ರದೇಶದಲ್ಲಿ ಬಂಧಿಸಲಾಗಿದೆ. ಅತನಿಂದ 181 ಗ್ರಾಮ್ ಚಿನ್ನ, 333 ಗ್ರಾಮ್ ಬೆಳ್ಳಿ ಹಾಗೂ 12.25 ಲಕ್ಷ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ಕು ರಾಜ್ಯಗಳಲ್ಲಿ ದರೋಡೆ ಮಾಡುತ್ತಿದ್ದ ಸ್ವಾಮಿ, ಐಷಾರಾಮಿ ಜೀವನ ನಡೆಸುತ್ತಿದ್ದ. ತನ್ನ ಗೆಳತಿಗೂ 3 ಕೋಟಿ ರೂ. ಮೌಲ್ಯದ ಮನೆ ಕೊಡಿಸಿದ್ದ ಎಂದು ತಿಳಿದುಬಂದಿದೆ.

ಆರೋಪಿ ಸ್ವಾಮಿ 2003ರಲ್ಲಿ 15 ವರ್ಷದವನಿದ್ದಾಗಲೇ ಲ್ಯಾಪ್‌ಟಾಪ್ ಕದಿಯುತ್ತಿದ್ದ. ಆತನನ್ನು 2012ರಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ನಂತರ, ಜೈಲಿನಿಂದ ಬಿಡುಗಡೆಯಾಗಿದ್ದ. 2016ರಲ್ಲಿ, ಗುಜರಾತ್‌ನಲ್ಲಿ ದರೋಡೆ ಮಾಡಿದ್ದ ಆತನಿಗೆ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ, ಮತ್ತೆ ದರೋಡೆ ಆರಂಭಿಸಿದ್ದಾನೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X