ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

Date:

Advertisements
  • ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ
  • ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ

ಪಕ್ಷದೊಳಗಿನ ಕೆಲವರ ರಾಜಿ ರಾಜಕಾರಣ ಫಲವಾಗಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವಂತಾಯ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಹೆಸರು ಹೇಳಲಿಚ್ಚಿಸದ ಕೆಲ ಮುಖಂಡರ ವಿರುದ್ದ ವಾಗ್ದಾಳಿ ನಡೆಸಿದರು.

ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ. ಅವರುಗಳು ಅಂತಹ ನಡೆ ಇಡದಿದ್ದಿದ್ದರೆ ನಾವಿಂದು ವಿಪಕ್ಷದಲ್ಲಿ ಕೂರಬೇಕಾಗಿರಲಿಲ್ಲ ಎಂದರು.

Advertisements

ಮತ್ತೊಂದೆಡೆ ಇದೇ ರೀತಿಯ ಅಭಿಪ್ರಾಯವನ್ನು ವಲಸೆ ಬಿಜೆಪಿಗೆ, ಮಾಜಿ ಸಚಿವ ಎಂ ಟಿ ಬಿ ನಾಗರಾಜ್ ಕೂಡ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಸುಧಾಕರ್‌ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕೊಟ್ಟಿದ್ದರಿಂದ ನನ್ನನ್ನೂ ಒಳಗೊಂಡಂತೆ ಕೆಲವರ ಸೋಲಿಗೆ ಕಾರಣವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ನಲ್ಲಿದ್ದಾಗ ನಾನು ಮೂರು ಬಾರಿ ಗೆದ್ದಿದ್ದೇನೆ. ಬಿಜೆಪಿ ಸೇರಿ ಎರಡು ಬಾರಿ ಸ್ಪರ್ಧಿಸಿ ಎರಡೂ ಬಾರಿಯೂ ಸೋತಿದ್ದೇನೆ. ಸುಧಾಕರ್ ಚುನಾವಣೆಯಲ್ಲಿ ತಾನೂ ಸೋತ, ನಮ್ಮನ್ನೂ ಸೋಲಿಸಿದ. ಉಸ್ತುವಾರಿ ಸಚಿವ ಸ್ಥಾನವನ್ನು ಸುಧಾಕರ್ ಸರಿಯಾಗಿ ನಿಭಾಯಿಸಿಲ್ಲ.

ಈ ಸುದ್ದಿ ಓದಿದ್ದೀರಾ?:ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಆತ ಎಂದೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಕಿವಿ ಮೇಲೆ ಹಾಕಿಕೊಳ್ಳುತ್ತಿರಲಿಲ್ಲ, ಹೀಗಾಗಿ ಆತನಿಂದಲೇ ನಾನು ಮತ್ತು ಚಿಂತಾಮಣಿ ಅಭ್ಯರ್ಥಿ ಸೋಲುವಂತಾಯ್ತು. ಇದಕ್ಕೆ ಸುಧಾಕರ್ ಕಾರಣ ಎಂದು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X