ಸರ್ಕಾರಿ ಕಚೇರಿ & ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ ಬಳಕೆ ನಿಷೇಧಿಸಿ ಆದೇಶ

Date:

Advertisements

ಸರ್ಕಾರಿ ಕಚೇರಿ ಮತ್ತು ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. 2024 ನವೆಂಬರ್‌ನಲ್ಲೇ ಈ ನಿಯಮ ಜಾರಿಗೆ ತಂದಿದ್ದರೂ ಆದೇಶ ಪಾಲನೆ ಆಗದಿರುವ ಹಿನ್ನಲೆಯಲ್ಲಿ ಮತ್ತೆ ಜಾರಿಗೆ ತರಲಾಗಿದೆ.

ಪ್ಲಾಸ್ಟಿಕ್‌ನಿಂದ ಪರಿಸರ ಹಾಗೂ ಮನಷ್ಯನ ಆರೋಗ್ಯ ಮೇಲೆ ಬೀಳುವ ದುಷ್ಪರಿಣಾಮ ತಡೆಯಲು ಸರ್ಕಾರ ಈ ನಿಯಮ ಜಾರಿಗೆ ಜನವರಿ 31 ರಂದು ಸುತ್ತೋಲೆ ಹೊರಡಿಸಿದೆ.

ಹಲವಾರು ವೇದಿಕೆ ಕಾರ್ಯಕ್ರಮಗಳಲ್ಲಿ ಅತಿಥಿಗಳಿ ಅರ್ಧ ಲೀಟರ್ ನೀರಿನ ಬಾಟಲ್‌ಗಳನ್ನು ಮುಂದಿಡುವುದು ರೂಢಿಯಾಗಿತ್ತು. ಹಲವೆಡೆ ಸಾರ್ವಜನಿಕರಿಗೂ ವಿತರಿಸಲಾಗುತ್ತದೆ. ನೂರಾರು, ಸಾವಿರಾರು ಸಂಖ್ಯೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಸರ್ಕಾರವೇ ಪ್ರೋತ್ಸಾಹಿಸಿದಂತಾಗುತ್ತದೆ ಎಂಬ ಕಾರಣಕ್ಕೆ ಏಕ ಬಳಕೆಯ ಪ್ಲಾಸ್ಟಿಕ್ ಬಾಟ‌ಲ್‌ಗಳನ್ನು ಕೊಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರವನ್ನು ಸರ್ಕಾರ ಕೈಕೊಂಡಿದೆ.

Advertisements

ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆಯೂ ಈ ಆದೇಶ ಜಾರಿಗೆ ಬರಲಿದೆ. ರಾಜ್ಯದ ಸರ್ಕಾರಿ ಕಚೇರಿ, ನಿಗಮ, ಮಂಡಳಿ, ವಿಶ್ವವಿದ್ಯಾನಿಲಯಗಳು, ಹಾಗೂ ಸರ್ಕಾರದ ಅನುದಾನದಿಂದ ಮಾಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ ನೀರಿನ ಬಳಕೆ, ಸರಬರಾಜು ನಿಷೇಧಿಸಲಾಗಿದೆ.

ಸರ್ಕಾರದ ಸಭೆ ಸಮಾರಂಭಗಳಲ್ಲಿ ಕಯಡಿಯುವ ನೀರು ಒದಗಿಸಲು ಶುಚಿತ್ವ ಉಳ್ಳ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತ್ತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X