ತುಮಕೂರು | ವಿಶೇಷ ಪ್ರಕರಣದಡಿ ಗಂಗರಾಜುಗೆ ನಿವೇಶನ ಭಾಗ್ಯ

Date:

Advertisements

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಹೊಸಹಳ್ಳಿ ಗ್ರಾಮದ ಗಂಗರಾಜುಗೆ ವಿಶೇಷ ಪ್ರಕರಣದಡಿ ನಿವೇಶನ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರಿಗೆ ಸೂಚನೆ ನೀಡಿದರು.

ನಗರದಲ್ಲಿಂದು ಸಚಿವರ ಭೇಟಿಗಾಗಿ ಕಾದು ಕುಳಿತಿದ್ದ ವಿಕಲಚೇತನ ಗಂಗರಾಜು ಅವರನ್ನು ಕಂಡ ಸಚಿವರು ಹತ್ತಿದ್ದ ಕಾರಿನಿಂದಿಳಿದು ಗಂಗರಾಜು ಬಳಿ ತೆರಳಿ ಮನವಿ ಅರ್ಜಿ ಸ್ವೀಕರಿಸಿ ವಿಚಾರಿಸಿದರು.  

ಹುಟ್ಟುವಾಗಲೇ ಶೇ.80ರಷ್ಟು ಅಂಗವೈಕಲ್ಯ ಹೊಂದಿರುವ ಗಂಗರಾಜು ಅವರು ತುಮಕೂರು ತಾಲೂಕು ಕೋರ ಹೋಬಳಿ ಅರಕೆರೆ ಗ್ರಾಮ ಪಂಚಾಯತಿ ಹೊಸಹಳ್ಳಿ ಗ್ರಾಮದಲ್ಲಿ 20 x 15 ಜಾಗದಲ್ಲಿ ಸುಮಾರು 20 ವರ್ಷಗಳಿಂದ ಅಂಗಡಿಯನ್ನಿಟ್ಟುಕೊಂಡು ಬದುಕಿಗಾಗಿ ಆಸರೆ ಪಡೆದುಕೊಂಡಿದ್ದೇನೆ. ಸದರಿ ಜಾಗವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

Advertisements

ಮನವಿಗೆ ಸ್ಪಂದಿಸಿದ ಪರಮೇಶ್ವರ ಸ್ಥಳದಲ್ಲಿದ್ದ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಕೂಡಲೇ ಕ್ರಮ ಕೈಗೊಂಡು ವರದಿ ನೀಡಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X