ಸಾಲಕ್ಕಿಂತ ಹೆಚ್ಚು ಹಣ ವಸೂಲಿ: ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ

Date:

Advertisements

ಅಪರಾಧಿಯಾಗಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಬ್ಯಾಂಕ್‌ಗಳಿಗಿಂತ ಸಾಲ ವಸೂಲಾತಿ ಖಾತೆಗಳ ಲೆಕ್ಕ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಲ್ಯ ಪರವಾಗಿ ಹಿರಿಯ ವಕೀಲ ಸಾಜನ್ ಪೂವಯ್ಯ ವಾದ ಮಂಡಿಸಿದ್ದಾರೆ. ಮಲ್ಯ ಪರ ವಕೀಲರ ಪ್ರಕಾರ 6,200 ಕೋಟಿ ರೂ. ಮರುಪಾವತಿಯಾಗಬೇಕಿತ್ತು, ಆದರೆ 14,000 ಕೋಟಿ ರೂ.ವಸೂಲಿ ಮಾಡಲಾಗಿದೆ. ಇದನ್ನು ಲೋಕಸಭೆಗೆ ಹಣಕಾಸು ಸಚಿವರು ತಿಳಿಸಿದ್ದಾರೆ ಎಂದು ಮಲ್ಯ ಪರ ವಕೀಲರು ಹೇಳಿದ್ದಾರೆ.

10,200 ಕೋಟಿ ವಸೂಲಿಯಾಗಿದೆ ಎಂದು ಸಾಲ ವಸೂಲಾತಿ ಅಧಿಕಾರಿ ಹೇಳಿಕೆ ನೀಡಿದ್ದಾರೆ ಎಂದು ಮಲ್ಯ ಪರ ವಕೀಲರು ವಾದಿಸಿದ್ದಾರೆ. ಸಂಪೂರ್ಣ ಸಾಲದ ಮೊತ್ತವನ್ನು ತೆರವುಗೊಳಿಸಲಾಗಿದ್ದರೂ, ಪ್ರಕ್ರಿಯೆಯು ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ವಸೂಲಾದ ಸಾಲದ ಮೊತ್ತದ ವಿವರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ. ಮಲ್ಯ ಅವರ ಅರ್ಜಿಯನ್ನು ಆಧರಿಸಿ ನ್ಯಾಯಮೂರ್ತಿ ಆರ್. ದೇವದಾಸ್ ನೇತೃತ್ವದ ಹೈಕೋರ್ಟ್ ಪೀಠವು ಬ್ಯಾಂಕ್‌ಗಳು ಮತ್ತು ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಈ ಹಿಂದೆ 2024, ಡಿಸೆಂಬರ್ 18 ರಂದುವಿಜಯ್ ಮಲ್ಯ ಅವರು 6203 ಕೋಟಿ ರೂ. ಸಾಲದ ವಿರುದ್ಧ ಬ್ಯಾಂಕ್‌ಗಳು 14,131.60 ಕೋಟಿ ರೂ.ಗಳನ್ನು ವಸೂಲಿ ಮಾಡಿದ್ದಾರೆ ಎಂದು ಹೇಳಿದ್ದರು. ಈಗಲೂ ಅವರು ಆರ್ಥಿಕ ಅಪರಾಧಿಯಾಗಿಯೇ ಮುಂದುವರೆದಿದ್ದಾರೆ.

ಚೆನ್ನೈನ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡಾ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ದಿ ಫೆಡರಲ್‌ ಬ್ಯಾಂಕ್‌ ಲಿಮಿಟೆಡ್‌, ಐಡಿಬಿಐ ಬ್ಯಾಂಕ್‌ ಲಿಮಿಟೆಡ್‌, ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ ಲಿಮಿಟೆಡ್‌, ಪಂಜಾಬ್‌ ಮತ್ತು ಸಿಂದ್‌ ಬ್ಯಾಂಕ್‌, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಯುಕೊ ಬ್ಯಾಂಕ್‌, ಜೆ ಎಂ ಫೈನಾನ್ಶಿಯಲ್‌ ಅಸೆಟ್‌ ರಿಕನಸ್ಟ್ರಕ್ಷನ್‌ ಕಂಪನಿ ಪ್ರೈ.ಲಿ., ಯುಬಿಎಚ್‌ಎಲ್‌ನ ಅಧಿಕೃತ ಲಿಕ್ವಿಡೇಟರ್‌ಗೆ ತುರ್ತು ನೋಟಿಸ್‌ ಜಾರಿ ಮಾಡಿರುವ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X