ಬೇಟೆ ಎಡವಟ್ಟು; ಕಾಡು ಪ್ರಾಣಿ ಎಂದು ಭಾವಿಸಿ ತನ್ನ ಸ್ನೇಹಿತನಿಗೆ ಗುಂಡು ಹಾರಿಸಿ ಕೊಂದ ಗುಂಪು

Date:

Advertisements

ಬೇಟೆ ಮಾಡುವಾಗ ಗುಂಪೊಂದು ಮಾಡಿದ ಎಡವಟ್ಟಿನಿಂದ ತನ್ನ ಸ್ನೇಹಿತನನ್ನೇ ಕಳೆದುಕೊಂಡಿದೆ. ಕಾಡು ಪ್ರಾಣಿ ಎಂದು ಭಾವಿಸಿ ತನ್ನ ಸ್ನೇಹಿತನಿಗೆ ಗುಂಪೊಂದು ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಕಳೆದ ತಿಂಗಳೇ ನಡೆದಿದ್ದು ಆದರೆ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇನ್ನು ಈ ಗುಂಡಿನ ದಾಳಿಯಿಂದ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನು ಓದಿದ್ದೀರಾ? ಚಾಮರಾಜನಗರ | ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರ ಬಂಧನ

Advertisements

ಈ ಬಗ್ಗೆ ಮಾಹಿತಿ ನೀಡಿರುವ ಪಾಲ್ಘಾರ್ ಪೊಲೀಸ್ ಠಾಣೆಯ ಎಸ್‌ಡಿಪಿಒ ಅಭಿಜಿತ್ ಧರಶಿವಕರ್, “ಕಾಡು ಪ್ರಾಣಿ ಬೇಟೆಯಾಡಲೆಂದು ಗುಂಪು ಕಾಡಿಗೆ ಹೋಗಿತ್ತು. ಈ ವೇಳೆ ಗುಂಪಿನಲ್ಲಿದ್ದ ಕೆಲವು ಮಂದಿ ಪ್ರತ್ಯೇಕಗೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ವ್ಯಕ್ತಿಯೊಬ್ಬರು ಇನ್ನೋರ್ವ ವ್ಯಕ್ತಿಯನ್ನು ನೋಡಿ ಕಾಡು ಹಂದಿ ಎಂದು ಭಾವಿಸಿ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಇಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಮತ್ತೋರ್ವರಿಗೆ ಗಂಭೀರ ಗಾಯವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ತಪ್ಪಿ ಆದ ಈ ಅನಾಹುತದಿಂದಾಗಿ ಆತಂಕಕ್ಕೆ ಒಳಗಾದ ಗುಂಪು ಮೃತದೇಹವನ್ನು ಪೊದೆಯಲ್ಲಿ ಹುದುಗಿಸಿದ್ದರು. ಭಯಗೊಂಡು ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಸುಳಿವು ಮೇರೆಗೆ ತನಿಖೆಯನ್ನು ನಡೆಸಿದಾಗ ಆರು ಜನರು ಈ ಅಪರಾಧದಲ್ಲಿ ಭಾಗಿಯಾಗಿರುವ ಸಾಧ್ಯತೆ ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ನಕ್ಷತ್ರ ಆಮೆಗಳ ಬೇಟೆಯಾಡುತ್ತಿದ್ದ ಆರೋಪಿಗಳ ಬಂಧನ

“ಬುಧವಾರ ಶೋಧ ಕಾರ್ಯಾಚರಣೆ ನಡೆಸಿದಾಗ ಪೊಲೀಸರಿಗೆ ಕೊಳೆತ ಶ ಪತ್ತೆಯಾಗಿದೆ. ಸಾವಿಗೆ ದೃಢವಾದ ಕಾರಣವನ್ನು ಪತ್ತೆ ಹಚ್ಚಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಗಾಯಗೊಂಡಿದ್ದ ವ್ಯಕ್ತಿಯೂ ಕೂಡಾ ಸಾವನ್ನಪ್ಪಿದ್ದು ಗ್ರಾಮಸ್ಥರು ಯಾರಿಗೂ ಮಾಹಿತಿ ನೀಡದೆ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಈ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X