ಬಳ್ಳಾರಿ | ಎಐಕೆಕೆಎಂಎಸ್‌ನಿಂದ ಪ್ರತಿಭಟನೆ; ಪ್ರಸ್ತುತ ಕೇಂದ್ರ ಬಜೆಟ್‌ ಪ್ರತಿ ಸುಟ್ಟು ಆಕ್ರೋಶ

Date:

Advertisements

ಮೋದಿಯವರ ವಿಕಸಿತ ಭಾರತದ ಕನಸು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿರುವುದು ಈ ಬಾರಿಯ ಕೇಂದ್ರ ಬಜೆಟ್ ನೋಡಿದರೆ ಗೊತ್ತಾಗುತ್ತದೆ. ಅವರ ವಿಕಸಿತ ಭಾರತ ದೊಡ್ಡ ದೊಡ್ಡ ಬಂಡವಾಳಶಾಹಿಗಳದ್ದೇ ಹೊರತು, ರೈತ, ಕೃಷಿ, ಕಾರ್ಮಿಕರಿಗಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಎಐಕೆಕೆಎಂಎಸ್ ಸಂಘದ ಜಿಲ್ಲಾಧ್ಯಕ್ಷ ಗೋವಿಂದ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬಳ್ಳಾರಿ ನಗರದ ತಾಲೂಕು ಕಚೇರಿ ಮುಂಭಾಗ ಎಐಕೆಕೆಎಂಎಸ್ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ 2025-2026ನೇ ಸಾಲಿನ ಬಜೆಟ್‌ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸುತ್ತ ಮಾತನಾಡಿದರು.

“ಈ ಬಾರಿಯ ಬಜೆಟ್‌ನಲ್ಲಿ ಮನರೇಗಾ ಯೋಜನೆಗೆ ಸುಮಾರು ₹4,000 ಕೋಟಿ, ಕೃಷಿಗೆ ₹4 ಲಕ್ಷ ಕೋಟಿಗಿಂತ ಅಧಿಕ ಹಣ ಕಡಿತ ಗೊಳಿಸಲಾಗಿದೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಟಾವಿಗೆ ಬಂದ ಜೋಳದ ಬೆಳೆಗೆ ಬೆಂಕಿ; ₹2 ಲಕ್ಷ ಮೌಲ್ಯ ಬೆಳೆನಾಶ

ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, “ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಆದಾಯವನ್ನು ದುಪ್ಪಟ್ಟು ಮಾಡುವೆವೆಂದು ಹೇಳುತ್ತಲೇ ಇದೆ. ಆದರೆ ನಮ್ಮ ರೈತರ ಬದುಕು ನೋಡಿದರೆ ಎಷ್ಟರ ಮಟ್ಟಿಗೆ ಶ್ರೀಮಂತಗೊಳಿಸಿದ್ದಾರೆ ಎಂಬುದು ತಿಳಿಯುತ್ತದೆ. ಒಟ್ಟಾರೆ ಇಂದು ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಈ ವ್ಯವಸ್ಥೆಯಲ್ಲಿ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಾರೆ. ಇದನ್ನು ನಾವು ಅರ್ಥ ಮಾಡಿಕೊಂಡು ನಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಲಿಷ್ಠ ಹೋರಾಟಕಟ್ಟಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಳ್ಳಾರಿ ತಾಲೂಕು ಕಾರ್ಯದರ್ಶಿ ಧನರಾಜ, ರೈತ ಹನುಮಂತ, ನಿಂಗಣ್ಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಪಾಲಿಕೆ ಕಸದ ವಾಹನ ಹರಿದು ಮೂರು ವರ್ಷದ ಮಗು ಸಾವು : ಚಾಲಕನ ವಿರುದ್ಧ ದೂರು ದಾಖಲು

ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ...

ಬಳ್ಳಾರಿ | ಈಶ್ವರಚಂದ್ರ ವಿದ್ಯಾಸಾಗರರ ಜನ್ಮದಿನ ಆಚರಿಸಿದ ಎಐಡಿಎಸ್‌ಒ

ಊಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಢ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ...

ಆಸ್ಪತ್ರೆ ಎದುರಿಗೊಂದು ನಿಷ್ಕ್ರಿಯ ನೀರಿನ ಘಟಕ; ನೀರಿಗಾಗಿ ನಿತ್ಯ ರೋಗಿಗಳ ಪರದಾಟ

ಸರಕಾರದ ಶುದ್ಧ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಹಲವು ಬಡಾವಣೆಗಳಲ್ಲಿ ಸ್ಥಾಪಿತಗೊಂಡ ಶುದ್ಧ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ...

Download Eedina App Android / iOS

X