ವಿಜಯಪುರ | ಮತದಾನ ಮಾಡುವುದು ನಾಗರಿಕರ ಜವಾಬ್ದಾರಿ: ನೋಡಲ್ ಅಧಿಕಾರಿ ಚಿದಾನಂದ

Date:

Advertisements

ಪ್ರಜಾtಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ಮತದಾನ ಮಾಡುವುದು ಅತ್ಯಗತ್ಯವಾಗಿದೆ ಎಂದು ಇ.ಎಲ್.ಸಿ ನೋಡಲ್ ಅಧಿಕಾರಿ ಚಿದಾನಂದ್ ಅನೂರ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಂದಿದ ಎನ್.ಎಸ್.ಎಸ್ ಕೋಶ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮಹಿಳಾ ವಿವಿ ಸ್ವೀಪ್ ಸಮಿತಿ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ “ಸ್ವಚ್ಛತಾ ಮತ್ತು ಮತದಾನದ” ಅರಿವು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ಯುವಜನತೆ ದೇಶದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ. ಆದ್ದರಿಂದ ಅವರಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಅರ್ಥಮಾಡಿಸುವುದು ಅವಶ್ಯಕವಾಗಿದೆ. ಶಾಲಾ-ಕಾಲೇಜುಗಳಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳು, ಸಾರ್ವಜನಿಕ ಭಾಷಣಗಳು ಮತ್ತು ಸಾಮಾಜಿಕ ಮಾಧ್ಯಮದ ಬಳಕೆಯ ಮೂಲಕ ಮತದಾನದ ಮಹತ್ವವನ್ನು ಬೋಧಿಸುವುದು ಪ್ರಭಾವಶಾಲಿಯಾಗಬಹುದು ಎಂದರು.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಲಂಚ ಸ್ವೀಕಾರ ಆರೋಪ; ಟ್ರಾಫಿಕ್ ಎಸ್‌ಐ ಶರೀಫ್, ಸಿಬ್ಬಂದಿಗೆ ಜಾಮೀನು

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಎಚ್.ಎಂ.ಚಂದ್ರಶೇಖರ ಮಾತನಾಡಿ, ಯುವಜನತೆ ದಾರಿ ತಪ್ಪುವ ಪ್ರಮುಖ ಕಾರಣಗಳು ತಾಂತ್ರಿಕ ಪ್ರಭಾವ, ನಿರುದ್ಯೋಗ, ಮತ್ತು ಜಾಗೃತಿಯ ಕೊರತೆ, ಇದನ್ನು ತಡೆಯಲು ಶಾಲಾ-ಕಾಲೇಜುಗಳಲ್ಲಿ ಮತದಾನದ ಮಹತ್ವ ಮತ್ತು ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಒಂದು ವೋಟು ದೇಶದ ಭವಿಷ್ಯ ರೂಪಿಸುವ ಶಕ್ತಿ ಹೊಂದಿದೆ. ಅದನ್ನು ಜವಾಬ್ದಾರಿಯಿಂದ ಬಳಸಿ, ಉತ್ತಮ ನಾಯಕರನ್ನು ಆಯ್ಕೆ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಎನ್‌ಎಸ್ಎಸ್ ಸಂಯೋಜನಾಧಿಕಾರಿ ಪ್ರೊ.ಅಶೋಕಕುಮಾರ ಸುರಪುರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿವಿಧ ವಿಭಾಗದ ಮುಖ್ಯಸ್ಥರುಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸಂಶೋಧನಾ ವಿದ್ಯಾರ್ಥಿನಿ ಫೆಲೋಮಿನಾ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ವಿವಿ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಡಾ.ತಹಮೀನಾ ನಿಗಾರ ಸುಲ್ತಾನಾ ವಂದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X