ರಾಯಚೂರಲ್ಲಿ 2ನೇ ತರಗತಿ ವಿದ್ಯಾರ್ಥಿನಿ & ಹಾಸನದಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

Date:

Advertisements

ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ವರದಿಯಾಗಿದೆ. ಹಾಗೆಯೇ ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮಾನ್ವಿಯಲ್ಲಿ ಪ್ರಕರಣ ಸಂಬಂಧ ಅತ್ಯಾಚಾರ ಆರೋಪಿ ಶಿವನಗೌಡ ಹಾಗೂ ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಮಾನ್ವಿ ಪೊಲೀಸರು ವಶಕ್ಕೆ ಪಡೆದಿದ್ದು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾಲೆಯಿಂದ ಮನೆಗೆ ಕರೆದೊಯ್ಯುವ ನೆಪಮಾಡಿ ಆರೋಪಿ ಶಿವನಗೌಡ ಬಾಲಕಿಯನ್ನು ಶಾಲೆಯಿಂದ ಕರೆದುಕೊಂಡು ಹೋಗಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಸಂತ್ರಸ್ತೆ ಬಾಲಕಿಯನ್ನು ಮಾನ್ವಿ ತಾಲೂಕು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

Advertisements

ಪೋಷಕರ ಅನುಮತಿಯಿಲ್ಲದೆ ಅಪರಿಚಿತರೊಂದಿಗೆ ಮಗುವನ್ನು ಕಳುಹಿಸಿದ ಶಾಲಾ ಸಿಬ್ಬಂದಿ ವಿರುದ್ಧ ಸಂತ್ರಸ್ತೆ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅತ್ಯಾಚಾರ ಎಸಗಿದಾತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಬೇರೆ ಯಾವ ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಂಭಮೇಳದ ಕಾಲ್ತುಳಿತದಲ್ಲಿ ಗತಿಸಿದವರ ಮನೆಗಳಿಗೇಕೆ ಧಾವಿಸಲಿಲ್ಲ ಬಿಜೆಪಿ ಹಿಂಡು?

ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಎರಡು ಮಕ್ಕಳ ತಂದೆ, ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ಪಕ್ಕದ ಮನೆಯ ನಿವಾಸಿಯಿಂದಲೇ ಈ ಹೀನಕೃತ್ಯ ನಡೆದಿದೆ. ಮಂಗಳವಾರ ಬಾಲಕಿಯ ಮನೆಯವರು ಸಂಬಂಧಿಕರೊಬ್ಬರ ಬೀಗರ ಔತಣ ಕಾರ್ಯಕ್ರಮಕ್ಕೆ ಹೋಗಿದ್ದರು. ಬಾಲಕಿ ಒಬ್ಬಳೇ ಮನೆಯಲ್ಲಿದ್ದಳು. ಇದೇ ಸಮಯಕ್ಕಾಗಿ ಕಾದಿದ್ದ ಆರೋಪಿ, ಚಾಕೊಲೆಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಸಂಜೆ ವೇಳೆಗೆ ಪೋಷಕರು ಬಂದಾಗ ಬಾಲಕಿಯ ವರ್ತನೆ ಬದಲಾಗಿತ್ತು. ಒಂದೇ ಸಮನೆ ಅಳಲಾರಂಭಿಸಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಗೆ ತೋರಿಸಿದಾಗ ಅತ್ಯಾಚಾರ ನಡೆದಿದೆ ಎಂಬುದು ದೃಢವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಆರೋಪಿ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿ ತಲೆ ಮರೆಸಿಕೊಂಡಿದ್ದಾನೆ. ಬಾಲಕಿ ಪೋಷಕರು ಹಳೆಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕರ್ನಾಟಕದ ಜನರ ಮನಸ್ಥಿತಿಯೂ ಉತ್ತರ ಭಾರತದ ರಾಜ್ಯಗಳಂತೆ ಆಗುತ್ತಿರುವುದು ದುರಂತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

Download Eedina App Android / iOS

X