ರಾಯಚೂರು | ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು ಶೋಭೆಯಲ್ಲ: ಶಾಸಕ ಮಾನಪ್ಪ ವಜ್ಜಲ್

Date:

Advertisements

ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು, ರಾಜ್ಯಾಧ್ಯಕ್ಷರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ರಾಯಚೂರಿಗೆ ಏಮ್ಸ್ ಬೇಕು ಎಂಬ ಬೇಡಿಕೆಯೊಂದಿಗೆ ನಡೆಯುತ್ತಿರುವ ಸಾವಿರ ದಿನಗಳ ಬೃಹತ್ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇತ್ತೀಚೆಗೆ ಪಕ್ಷದಲ್ಲಿರುವವರೇ ಒಬ್ಬರ ಮೇಲೊಬ್ಬರು ಹೇಳಿಕೆ ನೀಡುತ್ತಿರುವುದು ಜನತೆಯ ಮುಂದೆ ಹಾಸ್ಯಾಸ್ಪದವಾಗಿದೆ. ಕಾರ್ಯಕರ್ತರು ಬೇಸರಗೊಳ್ಳುತ್ತಿದ್ದಾರೆ. ಪಕ್ಷ ಕಟ್ಟಿದವರ ಬಗ್ಗೆಯೇ ಮನಬಂದಂತೆ ಹಗುರವಾಗಿ ಮಾತನಾಡುವುದನ್ನು ಮೊದಲು ಬಂದ್‌ ಮಾಡಬೇಕು. ಅದನ್ನ ಹೈಕಮಾಂಡ್‌ ನೋಡಿಕೊಳ್ಳಲಿದೆ” ಎಂದರು.‌

ಈ ಸುದ್ದಿ ಓದಿದ್ದೀರಾ?: ರಾಯಚೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪರಾರಿ

Advertisements

ಪಕ್ಷದಲ್ಲಿನ ಆಂತರಿಕ ಸಂಘರ್ಷ ಬೇರೆ ಪಕ್ಷಗಳಿಗೆ ಲಾಭವಾಗಿ ಪರಿಣಮಿಸಬಾರದು. ಇಲ್ಲವಾದರೆ ಪಕ್ಷದಲ್ಲಿ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ಒಗ್ಗಟ್ಟಿನಿಂದ ಪಕ್ಷ ಬಲಿಷ್ಠಪಡಿಸಬೇಕಿದೆ. ಪಕ್ಷ ಕಟ್ಟಿದವರನ್ನು ನಿಂದಿಸುವುದು ಸರಿಯಲ್ಲ. ಮೊದಲು ಇದೆಲ್ಲವೂ ನಿಲ್ಲಬೇಕು. ಆ ನಿಟ್ಟಿನಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಕ್ರಮ ವಹಿಸುವಂತೆ ಒತ್ತಡ ಹೇರಲಾಗಿದೆ. ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಶಿಸ್ತು ಕಾಪಾಡಿಕೊಂಡು ನಡೆಯಬೇಕು” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X