ಬಳ್ಳಾರಿ | ರಸ್ತೆ ಕಾಮಗಾರಿ ಮುಗಿದರೂ ಸಂಚಾರಕ್ಕೆ‌ ಅವಕಾಶವಿಲ್ಲದ ರೈಲ್ವೆ ಅಂಡರ್ ಪಾಸ್

Date:

Advertisements

ಬಳ್ಳಾರಿ ನಗರದ ದುರ್ಗಮ್ಮ ಗುಡಿ ಹತ್ತಿರದ ರೈಲ್ವೆ ಅಂಡರ್ ಪಾಸ್‌ ರಸ್ತೆ ಕಾಮಗಾರಿಯು, ಅಂದಾಜು ₹1.80 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಕೇಂದ್ರವು ʼರೆಡ್ ಇನ್ಪ್ರಾʼ ಗುತ್ತಿಗೆದಾರರ ಮೂಲಕ ರಸ್ತೆ ಅಭಿವೃದ್ಧಿ ಮಾಡಿಸಿದ್ದು, ಕಾಲುದಾರಿಯೂ ನಿರ್ಮಾಣವಾಗಿದೆ. ಆದರೆ ವಿದ್ಯುತ್ ವ್ಯವಸ್ಥೆಯಾಗದೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.

“ರಸ್ತೆ ದುರಸ್ತಿಗೋಸ್ಕರ ವಾಹನಗಳ ಸಂಚಾರ ಬಂದ್ ಮಾಡಿರುವುದರಿಂದ ಇತರೆ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಆದರೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾತ್ರ ಇಂದು ಮುಗಿಯಲಿದೆ, ನಾಳೆ ಮುಗಿಯಲಿದೆಯೆಂದು ಸಬೂಬು ಹೇಳುತ್ತಿದ್ದಾರೆ. ನಾಳೆ, ನಾಳೆ ಎನ್ನುವ ಕಾರಣ ಕೊಡುವುದು ಯಾವಾಗ ನಿಲ್ಲುವುದೋ ದೇವರೇ ಬಲ್ಲ” ಎಂದು ಪಟ್ಟಣದ ನಾಗರಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಕಾಂಕ್ರೀಟ್‌ ರಸ್ತೆ

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಸ್ಥಳೀಯರು ಮಾತನಾಡಿ, “ರಸ್ತೆಯ ಎರಡು ಬದಿಯಲ್ಲಿನ ಗೋಡೆಗೆ ವಿವಿಧ ವರ್ಣದ ಚಿತ್ತಾರ ಬಿಡಿಸಿರುವುದು ಸ್ವಾಗತಾರ್ಹ. ಆದರೆ ಆ ರಸ್ತೆಯನ್ನು ಬಂದ್ ಮಾಡಿ 2 ತಿಂಗಳು ಕಳೆದರೂ ಸಾರ್ವಜನರು ಓಡಾಡಲು ಅನುಕೂಲ ಮಾಡಿಕೊಟ್ಟಿಲ್ಲ. ಇದರಿಂದ ವಾಹನಸವಾರರಿಗೆ, ಪಾದಚಾರಿಗಳ ಸಂಚಾರಕ್ಕೆ ಪರದಾಡುವಂತಾಗಿದೆ. ಹಾಗಾಗಿ ಅಂಡರ್ ಪಾಸ್‌ ರಸ್ತೆಯನ್ನು ಕೂಡಲೇ ಸಂಚಾರ ಯೋಗ್ಯ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ಧಿ ಓದಿದ್ದಿರಾ? ಬಳ್ಳಾರಿ | ಉದ್ಯೋಗ, ಆರ್ಥಿಕ ಸಮಾನತೆ ನೀಡುವಲ್ಲಿ ಕೇಂದ್ರ ಬಜೆಟ್ ವಿಫಲ: ಡಿವೈಎಫ್‌ಐ ಆರೋಪ

ಸ್ಥಳೀಯ ನಿವಾಸಿ ವಿಜಯಕುಮಾರ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾರ್ವಜನಿಕರಿಗೆ ಮುಕ್ತವಾಗಿ ಸಂಚರಿಸಲು ನಿರ್ಮಾಣ ರಸ್ತೆ ತೆರವು ಮಾಡುವುದರಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಹೀಗೇ ಆದರೆ ನಗರದಲ್ಲಿ ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತದೆ. ಜನರು ಸಂಚರಿಸಲು ಪರದಾಡುವಂತಾಗುತ್ತದೆ. ಆದ್ದರಿಂದ, ಶಾಸಕರು, ಸಂಸದರು, ಸಚಿವರು ಸೇರಿದಂತೆ ಸ್ಥಳೀಯ ನಾಯಕರು ರಾಜಕಾರಣ ಹೊರಗಿಟ್ಟು ನಗರದ ಅಬಿವೃದ್ಧಿ ಕಡೆ ಚಿಂತಿಸಬೇಕು” ಎಂದು ಆಗ್ರಹಿಸಿದರು.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X