ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

Date:

Advertisements
  • ಸೂಕ್ಷ್ಮ ಪ್ರದೇಶದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಿ
  • ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸಿ

ಮಳೆಗಾಲದ ಅವಧಿಯಲ್ಲಿ ಅವಘಡಗಳು ಸಂಭವಿಸಿದಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ತಕ್ಷಣ ಸ್ಪಂದಿಸಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಸೂಚನೆ ನೀಡಿದರು.

ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮುಂಗಾರು ಅವಧಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆಗಾಲದ ಸಂದರ್ಭದಲ್ಲಿ ಪ್ರವಾಹ, ಭೂ ಕುಸಿತ ಉಂಟಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಗಾಳಿ ಮಳೆಯಿಂದಾಗಿ ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ವಿದ್ಯುತ್ ಕಡಿತ, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಂದಾಯ, ಸೆಸ್ಕಾಂ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

Advertisements

ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸುವಂತಾಗಬೇಕು. ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡಬೇಕು ಎಂದು ಹೇಳಿದರು.

ಕಾಳಜಿ ಕೇಂದ್ರಕ್ಕೆ ಬರುವ ಜನರಿಗೆ ಮಾನಸಿಕ ಧೈರ್ಯ ತುಂಬಲು ಆರೋಗ್ಯ ಇಲಾಖೆ ವತಿಯಿಂದ ಆಪ್ತ ಸಮಾಲೋಚಕರನ್ನು ನಿಯೋಜಿಸಬೇಕು. ಕಾಳಜಿ ಕೇಂದ್ರಗಳಿಗೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ಯಾವುದೇ ಲೋಪ ದೋಷಗಳಾಗದಂತೆ ಎಚ್ಚರವಹಿಸಬೇಕು. ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಗುರುತಿಸಿರುವ ಸೂಕ್ಷ್ಮ ಪ್ರದೇಶದಲ್ಲಿನ ಜನರಿಗೆ ಕೂಡಲೇ ನೋಟಿಸ್ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರಾಜಕಾಲುವೆ, ಚರಂಡಿಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಹಾಗೂ ತಾತ್ಕಾಲಿಕವಾಗಿ ರಸ್ತೆಗಳ ಗುಂಡಿ ಮುಚ್ಚಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬೀಳುವ ಮರಗಳನ್ನು ಕೂಡಲೇ ತೆರವುಗೊಳಿಸಬೇಕು. ರಸ್ತೆಗಳಿಗೆ ಅಡ್ಡವಾಗಿ ಬೆಳೆದಿರುವ ಗಿಡಗಂಟಿಗಳನ್ನು ಕಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ರೋಗಗಳು ಹರಡದಂತೆ ಎಚ್ಚರವಹಿಸಿ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಇರಬೇಕು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ಸಿಗಲು ಕ್ರಮ ಕೈಗೊಳ್ಳುವಂತೆ ಕರ್ತವ್ಯ ನಿರ್ವಹಿಸಿ ಎಂದರು.

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಶಾಲಾ ಕಟ್ಟಡಗಳ ವರದಿ ನೀಡಬೇಕು ಮತ್ತು ಅಂತಹ ಕಟ್ಟಡಗಳಲ್ಲಿ ಮಕ್ಕಳಿಗೆ ಪಾಠ ಮಾಡಬಾರದು, ಅಂಗನವಾಡಿಗಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಠಿಕಾಂಶದ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಬೇಕು ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಖರ್ ಮಾತನಾಡಿ, ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಲಾಗಿದೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

19 ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಶಾಲೆಗಳ ಮುಖ್ಯೋಪಾಧ್ಯಾಯರನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಸ್ಥಳೀಯವಾಗಿ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಎಂದು ತಿಳಿಸಿದರು.

ತಹಶೀಲ್ದಾರ್ ಕಿರಣ್ ಗೌರಯ್ಯ ಮಾತನಾಡಿ, ಸೂಕ್ಷ್ಮ ಪ್ರದೇಶದಲ್ಲಿ ವಾಸಿಸುವ ಜನರನ್ನು ಗುರುತಿಸಿ ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಎನ್‍ಡಿಆರ್‌ಎಫ್‌ ಇನ್ಸ್ಪೆಕ್ಟರ್ ಶಾಂತಿಲಾಲ್ ಜಾಟಿಯಾ ಮತನಾಡಿ, 24 ಸಿಬ್ಬಂದಿಗಳನ್ನು ಒಳಗೊಂಡ ತಂಡವಿದ್ದು ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಕೂಡಲೇ ಸ್ಪಂದಿಸಲಾಗುವುದು. ದಿನದ 24 ಗಂಟೆಗಳಲ್ಲೂ ಲಭ್ಯವಿರುವುದಾಗಿ ಹೇಳಿದರು.

ಸೆಸ್ಕ್ ಎಂಜಿನಿಯರ್ ವಿನಯ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ತಹಶೀಲ್ದಾರ್ ಪ್ರಕಾಶ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ ಪಿಡಿಒಗಳು ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X