ರಿಪೋದರ 0.25 ಇಳಿಸಿದ ಆರ್‌ಬಿಐ: ಐದು ವರ್ಷಗಳ ಬಳಿಕ ಮೊದಲ ಬಾರಿ ಇಳಿಕೆ

Date:

Advertisements

ಭಾರತೀಯ ರಿಸರ್ವ್ ಬ್ಯಾಂಕ್​ನ(ಆರ್‌ಬಿಐ) ಮಾನಿಟರಿ ಪಾಲಿಸಿ ಕಮಿಟಿ ರಿಪೋದರವನ್ನು ಶೇ. 0.25 ರಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಎರಡು ದಿನಗಳಿಂದ ನಡೆಯುತ್ತಿರುವ ಎಂಪಿಸಿ ಸಭೆಯ ಬಳಿಕ ಇಂದು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

0.25 ಇಳಿಕೆಯಿಂದ ಶೇ. 6.50ರಷ್ಟಿದ್ದ ಬಡ್ಡಿದರ ಶೇ. 6.25ಕ್ಕೆ ಕಡಿತಗೊಳ್ಳುತ್ತದೆ. 2020ರ ಬಳಿಕ ಮೊದಲ ಬಾರಿಗೆ ಆರ್​ಬಿಐನ ರಿಪೋ ದರ ಇಳಿಕೆ ಆಗಿದೆ. ಈ ಬಾರಿ 25 ಮೂಲಾಂಕಗಳಷ್ಟು ಇಳಿಕೆ ಆಗುತ್ತದೆ ಎಂದು ಬಹುತೇಕ ಆರ್ಥಿಕ ತಜ್ಞರು ನಿರೀಕ್ಷಿಸಿದ್ದರು. ಎಂಪಿಸಿಯಲ್ಲಿರುವ ಎಲ್ಲ ಆರು ಸದಸ್ಯರು ಸರ್ವಾನುಮತದಿಂದ 25 ಮೂಲಾಂಕಗಳಷ್ಟು ಬಡ್ಡಿದರ ಇಳಿಸಲು ನಿರ್ಧರಿಸಿದ್ದಾರೆ.

ಹಣದುಬ್ಬರ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿಯು ರಿಪೋ ದರ ಇಳಿಸುವ ನಿರ್ಧಾರ ತೆಗೆದುಕೊಂಡಿದೆ. ಈ ರಿಪೋ ದರ ಇಳಿಕೆಯಿಂದ ಬ್ಯಾಂಕುಗಳ ಸಾಲದರಗಳು ಕಡಿಮೆಗೊಳ್ಳುವ ಸಾಧ್ಯತೆ ಇದೆ. ಅದಾದಲ್ಲಿ ಸಾಲದ ಇಎಂಐ ಮೊತ್ತ ತುಸು ಕಡಿಮೆ ಆಗಬಹುದು.

Advertisements

ಏನಿದು ರಿಪೋ ದರ?
ರಿಪೋ ಎಂದರೆ ರೀ ಪರ್ಚೇಸಿಂಗ್​ನ ಸಂಕ್ಷಿಪ್ತ ರೂಪ. ಇದು ಆರ್​ಬಿಐನ ಬಡ್ಡಿದರವಾಗಿದೆ. ಕಮರ್ಷಿಯಲ್ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಸಾಲಕ್ಕೆ ವಿಧಿಸಲಾಗುವ ಬಡ್ಡಿದರ ಇದಾಗಿದೆ. ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿದರ ನಿಗದಿ ಮಾಡಲು ಈ ರಿಪೋ ದರ ಆಧಾರವಾಗಿರಬಹುದು.

ರಿವರ್ಸ್ ರಿಪೋ ಎಂದರೆ, ಕಮರ್ಷಿಯಲ್ ಬ್ಯಾಂಕುಗಳು ತಮ್ಮಲ್ಲಿರುವ ಫಂಡ್ ಅನ್ನು ಆರ್​ಬಿಐನಲ್ಲಿ ಇರಿಸಿದರೆ ಸಿಗುವ ಬಡ್ಡಿ. ಇದೂ ಕೂಡ ಬ್ಯಾಂಕುಗಳ ಠೇವಣಿ ದರಗಳಿಗೆ ಆಧಾರವಾಗಬಹುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

2023ರ ಫೆಬ್ರುವರಿಯಿಂದ, ಅಂದರೆ ಎರಡು ವರ್ಷದಿಂದ ರಿಪೋ ದರ ಶೇ. 6.50ರಲ್ಲೇ ಇತ್ತು. 2020ರ ಮೇ ಬಳಿಕ ಆರ್​ಬಿಐ ತನ್ನ ದರಗಳನ್ನು ಇಳಿಸಿದ್ದೇ ಇಲ್ಲ. ನಾಲ್ಕರಿಂದ ಐದು ವರ್ಷದ ಬಳಿಕ ಆರ್​ಬಿಐ ಮೊದಲ ಬಾರಿಗೆ ರಿಪೋ ದರ ಇಳಿಸಿದಂತಾಗಿದೆ.

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರಿಗೆ ಇದು ಮೊದಲ ಎಂಪಿಸಿ ಸಭೆ. ಕಳೆದ ತಿಂಗಳಷ್ಟೇ ಅವರು ಆರ್​ಬಿಐನ 26ನೇ ಗವರ್ನರ್ ಆಗಿ ನೇಮಕಗೊಂಡಿದ್ದರು. ಆರ್​ಬಿಐನ ಎಂಪಿಸಿಯಲ್ಲಿ ಆರು ಸದಸ್ಯರಿದ್ದಾರೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ಸಮಿತಿಯ ಮುಖ್ಯಸ್ಥರು. ಈ ಸಮಿತಿಯಲ್ಲಿ ಗವರ್ನರ್ ಅವರನ್ನೂ ಸೇರಿ ಮೂವರು ಸದಸ್ಯರು ಆರ್​ಬಿಐನ ಅಧಿಕಾರಿಗಳೇ ಆಗಿದ್ದಾರೆ. ಇನ್ನುಳಿದ ಮೂವರು ಸ್ವತಂತ್ರ ಸದಸ್ಯರಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X