ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಜಾರಿ

Date:

Advertisements

10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪಂಜಾಬ್‌ನ ಲೂಧಿಯಾನ ನ್ಯಾಯಾಲಯವು ಬಂಧನ ವಾರೆಂಟ್‌ ಹೊರಡಿಸಿದೆ.

ವಕೀಲ ರಾಜೇಶ್ ಖನ್ನಾ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ ಸಾಕ್ಷಿ ಹೇಳಲು ಸೋನು ಸೂದ್ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಅವರಿಗೆ ಹಲವು ಬಾರಿ ಸಮನ್ಸ್‌ ನೀಡಿದರೂ, ಅವರು ಕೋರ್ಟ್‌ಗೆ ಬಂದಿಲ್ಲ. ಹೀಗಾಗಿ, ಅವರ ವಿರುದ್ಧ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ.

ತಮಗೆ ಮೋಹಿತ್ ಶುಕ್ಲಾ ಎಂಬವರು ವಂಚಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದ ಮೇಲೆ ಹೂಡಿಕೆ ಮಾಡಿದರೆ, ಹೆಚ್ಚು ಲಾಭ ದೊರೆಯುತ್ತದೆ ಎಂದು ಹೇಳಿ 10 ಲಕ್ಷ ರೂ. ಪಡೆದಿದ್ದಾರೆ. ಆದರೆ, ಯಾವುದೇ ಹಣವನ್ನು ಮರುಪಾವತಿಸದೆ ವಂಚಿಸಿದ್ದಾರೆ ಎಂದು ರಾಜೇಶ್‌ ಖನ್ನಾ ಆರೋಪಿಸಿದ್ದಾರೆ.

Advertisements

ಪ್ರಕರಣದ ವಿಚಾರಣೆಯನ್ನು ಲೂಧಿಯಾನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಮೂರ್ತಿ ರಮಣಪ್ರೀತ್ ಕೌರ್ ಅವರು ನಡೆಸಿದ್ದಾರೆ. ಸಾಕ್ಷಿ ಹೇಳಲು ಕೋರ್ಟ್‌ಗೆ ಹಾಜರಾಗದ ಸೂದ್ ವಿರುದ್ಧ ವಾರೆಂಟ್ ಜಾರಿ ಮಾಡಿದ್ದಾರೆ. ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಕರೆತರುವಂತೆ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಲಾಗಿದೆ.

ನಟ ಸೋನು ಸೂದ್ ಅವರು ಕೊರೋನ ಆಕ್ರಮಣ ಸಮಯದಲ್ಲಿ ಹೆಚ್ಚು ಗಮನ ಸೆಳೆದಿದ್ದರು. ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ಹೇರಿದ್ದರಿಂದ, ವಲಸೆ ಕಾರ್ಮಿಕರು ತಮ್ಮೂರುಗಳಿಗೆ ನಡೆದುಕೊಂಡೇ ಹೊರಟಿದ್ದರು. ಅವರ ಸಂಕಷ್ಟಗಳನ್ನು ಕಂಡು, ಮರುಗಿದ್ದ ಸೋನು ಸೂದ್‌, ನೂರಾರು ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ಹಣದಲ್ಲಿ ಬಸ್‌ ವ್ಯವಸ್ಥೆ ಒದಗಿಸಿ, ತಮ್ಮೂರುಗಳನ್ನು ತಲುಪಲು ಸಹಾಯ ಮಾಡಿದ್ದರು. ರೈತ ಹೋರಾಟದ ಸಮಯದಲ್ಲಿಯೂ ರೈತರ ಪರವಾಗಿ ದನಿ ಎತ್ತಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X