ಕೆ.ಎಲ್ ರಾಹುಲ್‌ಗೆ ಸುನಿಲ್ ಗವಾಸ್ಕರ್ ತರಾಟೆ

Date:

Advertisements

ಗುರುವಾರ ಸಂಜೆ ನಡೆದ ಇಂಗ್ಲೆಂಡ್‌-ಭಾರತ ಕ್ರಿಕೆಟ್‌ ತಂಡಗಳ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕು ವಿಕೆಟ್‌ಗಳ ನಷ್ಟದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಆದಾಗ್ಯೂ, ಕೆ.ಎಲ್ ರಾಹುಲ್ ಅವರ ಆಟದ ಬಗ್ಗೆ ಟೀಮ್ ಇಂಡಿಯಾದ ಮಾಜಿ ಸ್ಟಾರ್‌ ಆಟಗಾರ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಟೀಮ್‌ ಗೇಮ್‌ನಲ್ಲಿ ತಂಡದ ಆಟದ ಮೇಲೆ ಗಮನ ಇರಬೇಕೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್‌ ತಂಡ 248 ರನ್‌ಗಳನ್ನು ದಾಖಲಿಸಿತ್ತು. ಟೀಮ್ ಇಂಡಿಯಾ ಗೆಲ್ಲಲು 249 ರನ್‌ಗಳ ಗುರಿ ನೀಡಿತ್ತು. ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತ್ತು. 251 ರನ್‌ ಗಳಿಸಿ, ಗೆಲುವು ಸಾಧಿಸಿತು.

ಭಾರತ ತಂಡ ಗೆಲುವು ಸಾಧಿಸಲು ಕೇವಲ 28 ರನ್‌ಗಳ ಅಗತ್ಯವಿದ್ಧಾಗ ಕೆ.ಎಲ್‌ ರಾಹುಲ್ ಕ್ರೀಸ್‌ಗೆ ಇಳಿದರು. ಆ ವೇಳೆಗೆ, ಶುಭಮನ್ ಗಿಲ್ ಶತಕದ ಸನಿಹದಲ್ಲಿದ್ದರು. ರಾಹುಲ್ ಅವರ ಆಟದ ಶೈಲಿಯು ಗಿಲ್ ಶತಕ ಬಾರಿಸಲು ಅವಕಾಶ ಮಾಡಿಕೊಡಬೇಕೆಂಬ ಧೋರಣೆಯನ್ನು ಹೊಂದಿದೆ ಎಂಬ ರೀತಿಯಲ್ಲಿತ್ತು. 9 ಬಾಲ್‌ಗಳನ್ನು ಎದುರಿಸಿದ ರಾಹುಲ್, ಕೇವಲ 2 ರನ್‌ ಗಳಿಸಿ ಔಟಾದರು.

Advertisements

ಆದಾಗ್ಯೂ, 87 ರನ್ ಗಳಿಸಿದ್ದ ಗಿಲ್‌ ಕೂಡ ರಾಹುಲ್ ಔಟ್ ಆದ ಬೆನ್ನಲ್ಲೇ ಔಟ್‌ ಆದರು. ಪಂದ್ಯದಲ್ಲಿ ಕೆ.ಎಲ್ ರಾಹುಲ್ ಅವರ ಆಟದ ಶೈಲಿಯ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಿಲ್‌ ಅವರಿಗೆ ಸ್ಟ್ರೈಕ್ ನೀಡುವ ಆತುರದಲ್ಲಿ ಕೆ.ಎಲ್ ರಾಹುಲ್‌ ಔಟಾಗಿದ್ದಾರೆ ಎಂದು ಹಲವರು ಭಾವಿಸಿದ್ದಾರೆ.

ಈ ವೇಳೆ, ಕಾಮೆಂಟರಿಯಲ್ಲಿದ್ದ ಸುನಿಲ್ ಗವಾಸ್ಕರ್, “ಕೆಎಲ್ ರಾಹುಲ್ ತಮ್ಮ ಆಟವನ್ನು ಪಂದ್ಯಕ್ಕಾಗಿ ಆಡಬೇಕು. ಸಹಜವಾಗಿ ಬ್ಯಾಟಿಂಗ್ ಮಾಡಬೇಕು. ತಮ್ಮ ಜೊತೆಗಾರ ಶತಕ ಗಳಿಸುವ ಅವಕಾಶವಿದೆ ಎಂಬ ಕಾರಣಕ್ಕಾಗಿ ಅವರು ಆತುರದಲ್ಲಿ ಆಟವಾಡಿದರು. ಆಟಗಾರರಿಗೆ ತಂಡ ಆದ್ಯತೆ ಆಗಿರಬೇಕು. ಶುಭ್ಮನ್ ಗಿಲ್ ಅವರಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪಂದ್ಯವು ತಂಡದ ಆಟ. ರಾಹುಲ್ ತಮ್ಮ ಜೊತೆಗಾರ ಶತಕ ಗಳಿಸಲು ಸಹಾಯ ಮಾಡುವ ಉದ್ದೇಶದಿಂದ ಚೆಂಡನ್ನು ಅರ್ಧ ಮನಸ್ಸಿನಿಂದ ಎದುರಿಸಿದರು. ಔಟ್‌ ಆದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X