ಬೀದರ್ | ಭಜನೆ ಗಾಯಕ ಗೋವಿಂದ ಚವ್ಹಾಣಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Date:

Advertisements

ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಬಂಜಾರ ಭಜನೆ’ ಕ್ಷೇತ್ರದಲ್ಲಿ ಬಸವಕಲ್ಯಾಣ ತಾಲ್ಲೂಕಿನ ಖೆರ್ಡಾ(ಬಿ) ಶಂಕ್ರು ತಾಂಡಾ ನಿವಾಸಿ ಗೋವಿಂದ ಚವ್ಹಾಣ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಭಜನೆ ಗಾಯಕರಾದ ಗೋವಿಂದ ಚಚ್ಹಾಣ ಅವರಿಗೆ ಈಗ 75 ವರ್ಷ. ಚಿಕ್ಕಂದಿಂದಲೇ ಬಂಜಾರ ಭಜನೆ, ಜಾನಪದ ಕಲೆ ಮೈಗೂಡಿಸಿಕೊಂಡು ವಿವಿಧ ಕಾರ್ಯಕ್ರಮ, ಉತ್ಸವಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ದೂರದರ್ಶನ, ಆಕಾಶವಾಣಿ ಸೇರಿದಂತೆ ವಿವಿಧೆಡೆ ಭಜನಾ ಕಲಾ ತಂಡದೊಂದಿಗೆ ಭಾಗವಹಿಸಿ ಕಲೆ ಪ್ರದರ್ಶಿಸಿದ್ದಾರೆ.

ಇದೀಗ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಬಂಜಾರ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

Advertisements

ಈ ಕುರಿತು ಗೋವಿಂದ ಅವರು ಈದಿನ.ಕಾಮ್‌ ಜೊತೆ ಮಾತನಾಡಿ, ʼಬಂಜಾರ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದ ಅಕಾಡೆಮಿ ಅಧ್ಯಕ್ಷ ಗೋವಿಂದ ಸ್ವಾಮಿ ಅವರಿಗೆ ಧನ್ಯವಾದ ಸಲ್ಲಿಸುವೆ. ಸುಮಾರು ಐದು ದಶಕಗಳಿಂದ ಜಾನಪದ, ಬಂಜಾರ ಸಂಸ್ಕೃತಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಈಗ ಗುರುತಿಸಿ ಆಯ್ಕೆ ಮಾಡಿದ್ದು ಖುಷಿ ನೀಡಿದೆʼ ಎಂದರು.

ಅರ್ಹತೆ ಇದ್ದರೂ ದಕ್ಕದ ಮಾಸಾಶನ :

ಗಾಯಕ ಗೋವಿಂದ ಚಚ್ಹಾಣ ಅವರಿಗೆ ಈಗ 75 ವರ್ಷ. ಸುಮಾರು ಐದು ದಶಕಗಳಿಂದ ಭಜನೆ ಸೇರಿದಂತೆ ಅನೇಕ ಕಲಾ ಪ್ರಕಾರಗಳಲ್ಲಿ ಸಕ್ರಿಯರಾಗಿ ತಮ್ಮ ಕಲೆ ಪ್ರದರ್ಶನ ಮಾಡುತ್ತಿದ್ದಾರೆ. ಸರ್ಕಾರ ನೀಡುವ ಕಲಾವಿದರ ಮಾಸಾಶನ ಪಡೆಯಲು ಎಲ್ಲ ರೀತಿಯ ಅರ್ಹತೆಯಿದ್ದರೂ ಸಹ ಗೋವಿಂದ ಹಾಗೂ ಅವರ ತಂಡದವರು ಮಾಸಾಶನದಿಂದ ವಂಚಿತರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಆಶಾ ರಾಠೋಡ್‌ಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ʼಕಳೆದ ಹತ್ತು ವರ್ಷಗಳ ಹಿಂದೆ ಕಲಾವಿದರ ಮಾಸಾಶನಕ್ಕಾಗಿ ಅರ್ಜಿ ಹಾಕಿದ್ದೆ, ಆದರೆ ಯಾರೊಬ್ಬರೂ ಸ್ಪಂದಿಸಲಿಲ್ಲ. ತದನಂತರ ಪುನಃ ಅರ್ಜಿ ಹಾಕಲಿಲ್ಲ. ನಮ್ಮಂತಹ ಹಿರಿಯರಿಗೆ ಮಾಸಾಶನಕ್ಕಾಗಿ ಪರಿಗಣಿಸಬೇಕುʼ ಎಂದು ಗೋವಿಂದ ಚವ್ಹಾಣ ಅವರು ಈದಿನ.ಕಾಮ್‌ ಜೊತೆ ಮಾತನಾಡಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X