ಕಲಬುರಗಿ | ಪತಿಯ ಕಾಲು ಮುರಿಯಲು ಪತ್ನಿಯಿಂದ ಸುಪಾರಿ! : ಪತ್ನಿ ಸೇರಿ ನಾಲ್ವರ ಬಂಧನ

Date:

Advertisements

ಅನ್ಯ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಅನುಮಾನದಿಂದ ಪತಿಯ ಕಾಲು ಮುರಿಯಲು ಪತ್ನಿಯಿಂದ ಸುಪಾರಿ ನೀಡಿರುವ ಘಟನೆ ಕಲಬುರಗಿಯ ಬೃಹ್ಮಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿಯ ಅತ್ತರ್‌ ಕಾಂಪೌಂಡ್ ನಿವಾಸಿ ವೆಂಕಟೇಶ್ ಪಾಟೀಲ್‌ ಅವರು ಜನವರಿ 18 ರಂದು ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಆರೀಫ್, ಮನೋಹರ ಹಾಗೂ ಸುನೀಲ್ ಎಂಬುವವರು ವೆಂಕಟೇಶ್‌ ಅವರನ್ನು ಅಡ್ಡಗಟ್ಟಿ ಕಲ್ಲು ಮತ್ತು ಬಡಿಗೆಗಳಿಂದ ಕಾಲುಗಳಿಗೆ ಹೊಡೆದು ಹಣ ದೋಚಿಕೊಂಡು ಹೋಗಿದ್ದರು. ಬಲವಾಗಿ ಹೊಡೆದಿರುವ ಕಾರಣ ವೆಂಕಟೇಶ ಅವರ ಎರಡೂ ಕಾಲು ಮುರಿದು ಹೋಗಿವೆ. ಸದ್ಯ ವೆಂಕಟೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ವೆಂಕಟೇಶ ಅವರ ಮಗ ಪಿಯೂಷ್ ಜ.19ರಂದು ಬೃಹ್ಮಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯ ಪಿಎಸ್‌ಐ ಸೋಮಲಿಂಗಪ್ಪ ಕಿರದಳ್ಳಿ ನೇತ್ರತ್ವದ ತಂಡ ತನಿಖೆ ನಡೆಸಿ ಜ.27 ರಂದು ಈ ಪ್ರಕರಣದ ಆರೋಪಿಗಳಾದ ಆರಿಫ್, ಮನೋಹರ ಹಾಗೂ ಸುನೀಲ್ ಎಂಬಾತರನ್ನು ವಿಚಾರಣೆಗೊಳಪಡಿಸಿತ್ತು. ವೆಂಕಟೇಶ್‌ ಅವರ ಪತ್ನಿಯೇ ಸುಪಾರಿ ನೀಡಿದ್ದರು ಎಂದು ಆರೋಪಿಗಳು ಬಾಯಿಬಿಟ್ಟಿದ್ದರು. ಬಳಿಕ ಆರೋಪಿಗಳ ಹೇಳಿಕೆ ಆಧರಿಸಿ ವೆಂಕಟೇಶ್‌ ಅವರ ಪತ್ನಿ ಉಮಾದೇವಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸಿದಾಗ ಗಂಡನ ಕಾಲು ಮುರಿಯಲು ಸುಪಾರಿ ಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಮಾದರಿಯಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಿ- ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

ಬೇರೆ ಮಹಿಳೆಯ ಜೊತೆಗೆ ವೆಂಕಟೇಶ್ ಸಲುಗೆಯಿಂದ ವರ್ತಿಸುತ್ತಿರುವುದನ್ನು ಕಂಡು ಆತನ ಪತ್ನಿ ಉಮಾದೇವಿ ಬೇಸತ್ತು ಕೊನೆಗೆ ಪತಿಯ ಎರಡೂ ಕಾಲು ಮುರಿದರೆ ಆತ ಮನೆಯಲ್ಲಿಯೇ ಒಂದೆಡೆ ಬಿದ್ದಿರುತ್ತಾನೆ ಎಂದು ಯೋಚಿಸಿ ಉಮಾದೇವಿ 5 ಲಕ್ಷಕ್ಕೆ ಸುಪಾರಿ ನೀಡಿದ್ದರು. ಮುಂಗಡವಾಗಿ 50 ಸಾವಿರ ನೀಡಿದ್ದರು. ಸದ್ಯ ವೆಂಕಟೇಶ ಅವರ ಪತ್ನಿ ಉಮಾದೇವಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X