ಚಿಕ್ಕಮಗಳೂರು | ಕೆನರಾ ಬ್ಯಾಂಕ್‌ ಶಾಖೆ ಸ್ಥಳಾಂತರಿಸದಂತೆ ನಾಗರಿಕರ ಒತ್ತಾಯ

Date:

Advertisements

ಚಿಕ್ಕಮಗಳೂರು ನಗರದ ಕೋಟೆಯಲ್ಲಿ ಇರುವ ಕೆನರಾ ಬ್ಯಾಂಕ್ ಶಾಖೆಯನ್ನು ಎಸ್‌ಟಿಜೆ ಕಾಲೇಜಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಶಾಖೆಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಕೋಟೆಯ ನಾಗರಿಕರು ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಸಿಇಒ ಅನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಸಮಾಜಿಕ ಕಾರ್ಯಕರ್ತ ಕೋಟೆ ಸೋಮಣ್ಣ ಮಾತನಾಡಿ, ಕೋಟೆ ಶಾಖೆಯಲ್ಲಿ ರೈತಾಪಿ ವರ್ಗದರು ಹೆಚ್ಚಾಗಿ ಖಾತೆದಾರರಾಗಿದ್ದಾರೆ. ಜೊತೆಗೆ ಬಡವರು, ಕೂಲಿ ಕಾರ್ಮಿಕರು, ವಯಸ್ಸಾದ ಹಿರಿಯ ಪಿಂಚಣಿ ದಾರರು ಹಾಗೂ ಸರ್ಕಾರಿ ನೌಕರರು ಈ ಶಾಖೆಯಲ್ಲಿ ಖಾತೆದಾರರಾಗಿತ್ತಾರೆ. ಕೋಟೆಗೆ ಈ ಕೆನರಾ ಬ್ಯಾಂಕ್ ಶಾಖೆ ತರಲು ಏಳು ವರ್ಷಗಳ ಹಿಂದೆ ಇದ್ದ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ್ ಮತ್ತು ಸಾಕಷ್ಟು ಮಂದಿ ಶ್ರಮ ವಹಿಸಿದ್ದಾರೆ ಎಂದು ತಿಳಿಸಿದರು.

ಬಹಳಷ್ಟು ರೈತರು ಈ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದಾರೆ, ಚಿನ್ನದ ಮೇಲಿನ ಸಾಲ ಪಡೆದಿದ್ದಾರೆ, ಸೀಕ್ರೇಟ್ ಲಾಕರ್ ಓಪನ್ ಮಾಡಿಸಿರುತ್ತಾರೆ. ಬಹಳಷ್ಟು ಹಿರಿಯ ಪಿಂಚಣಿ ದಾರರು ಇದ್ದಾರೆ, ಸಾವಿರಾರು ಖಾತೆದಾರರು ಇದ್ದಾರೆ. ಲಾಭದಾಯಕವಾದ ಈ ಬ್ಯಾಂಕ್ ಅನ್ನು ಯಾವುದೋ ಒಂದು ಕಾರಣಕ್ಕೆ ಬದಲಾವಣೆ ಮಾಡುವುದು ಸರಿಯಲ್ಲ ಎಂದರು.

Advertisements
ಚಿಕ್ಕಮಗಳೂರು

ಶಾಖೆ ವಿಲೀನ ಮಾಡುವುದರಿಂದ ಬಹಳಷ್ಟು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ವಿಷಯವನ್ನು ಮರು ಪರಿಶೀಲನೆ ಮಾಡಿ. ಮೇಲಾಧಿಕಾರಿಗಳು ಇದರ ಬಗ್ಗೆ ಬ್ಯಾಂಕ್‌ನ ಗ್ರಾಹಕರಿಗೆ ಒಳ್ಳೆಯ ಮತ್ತು ಆಶಾದಾಯಕ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಗರಿಕರಾದ ಕೋಟೆ ಸೋಮಣ್ಣ, ಯಶೋಧ ರವೀಂದ್ರ, ಸುಧಾಕರ್ ಗೌಡ್ರ, ಹೇಮಚಂದ್ರು, ಶಶಿ ಕುಮಾರ್, ಶಿವಣ್ಣ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X