ದೆಹಲಿ ಫಲಿತಾಂಶ | 48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, ಎಎಪಿಯ ಪ್ರಮುಖರಿಗೆ ಹಿನ್ನಡೆ

Date:

Advertisements

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 48 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಎಪಿ 21 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುಂದಿದೆ.

ಎಎಪಿಯ ಪ್ರಮುಖರಿಗೆ ಹಿನ್ನಡೆ ಉಂಟಾಗಿದೆ. ಎಎಪಿ ಸಂಚಾಲಕ ಅರವಿಂದ ಕೇಜ್ರವಾಲ್, ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಹಿನ್ನಡೆಯಲ್ಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ದೇಶದ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಎಎಪಿ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ 27 ವರ್ಷಗಳ ನಂತರ ಬಿಜೆಪಿ ಸರ್ಕಾರ ರಚಿಸುತ್ತದೆಯೇ ಎಂಬುದು 11 ಗಂಟೆ ಹೊತ್ತಿಗೆ ಒಂದು ಚಿತ್ರಣ ಸಿಗಲಿದೆ.

Advertisements

ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 5 ರಂದು ಮತದಾನ ನಡೆದಿತ್ತು. ಕೇಂದ್ರ ಚುನಾವಣಾ ಆಯೋಗದ ಪ್ರಕಾರ ಶೇ.60.54ರಷ್ಟು ಮತಗಳು ಚಲಾವಣೆಯಾಗಿದೆ. 2020 ಕ್ಕೆ ಹೋಲಿಸಿದರೆ ಶೇ 2.5 ರಷ್ಟು ಕಡಿಮೆಯಾಗಿದೆ.

ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದ್ದರೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಎರಡು ಚುನಾವಣೋತ್ತರ ಸಮೀಕ್ಷೆಗಳು ಮಾತ್ರ ಆಮ್ ಆದ್ಮ ಪಕ್ಷ (ಎಎಪಿ) ವಿಜಯಶಾಲಿಯಾಗಿ, ಮತ್ತೆ ಅಧಿಕಾರದ ಗದ್ದುಗೆ ಮರಳಲಿದೆ ಎಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X