ದೇಶದ ಗಮನ ಸೆಳೆದಿರುವ ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.
ಹೊಸದಿಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿನಿಂದಲೂ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲೇ ಇದ್ದರು. ಬಿಜೆಪಿಯ ಪರ್ವೇಶ್ ವರ್ಮಾ ಅರವಿಂದ್ ಕೇಜ್ರಿವಾಲ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ದಿಲ್ಲಿ ಸಿಎಂ ಆತಿಶಿ, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಸೇರಿ ಎಎಪಿ ಪಕ್ಷದ ಪ್ರಭಾವಿ ನಾಯಕರು ಹಿನ್ನಡೆಯಲ್ಲಿದ್ದಾರೆ.
ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಎಪಿ 24 ಕ್ಷೇತ್ರಗಳಲ್ಲಿ ಮುಂದಿದೆ. ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ಆಡಳಿತಾರೂಢ ಆಪ್ಗೆ ನಿರಾಶೆಯಾಗಿದೆ. ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನಿಜವಾಗುತ್ತಿದೆ.