ಮಧ್ಯಪ್ರದೇಶ | ಗ್ರಾಮಸ್ಥರಿಗೆ ತಮ್ಮ ಅಧಿಕಾರ-ಹಕ್ಕು ಹಸ್ತಾಂತರ; ಒಪ್ಪಂದಕ್ಕೆ ಸಹಿ ಹಾಕಿದ ಗ್ರಾ.ಪಂ. ಸದಸ್ಯೆ

Date:

Advertisements

ತಮ್ಮ ಅಧಿಕಾರ ಮತ್ತು ಹಕ್ಕುಗಳನ್ನು ಪುರುಷನಿಗೆ ಹಸ್ತಾಂತರಿಸುವುದಾಗಿ ಮಹಿಳಾ ಸರಪಂಚ್ ಒಬ್ಬರು 500 ರೂಪಾಯಿಯ ಪೇಪರ್ ಮೇಲೆ ಒಪ್ಪಂದಕ್ಕೆ ಸಹಿ ಹಾಕಿರುವ ಘಟನೆ ಮಧ್ಯಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ದಾತು ಗ್ರಾಮ ಪಂಚಾಯತಿಯ ಸದಸ್ಯೆ (ಸರಪಂಚ್) ಕೈಲಾಶಿ ಬಾಯಿ ಕಛಾವಾ ಅವರು ಪಂಚಾಯತಿಯ ತಮ್ಮ ಸದಸ್ಯತ್ವದ ಅಧಿಕಾರ-ಹಕ್ಕುಗಳನ್ನು ಸುರೇಶ್ ಎಂಬಾತನಿಗೆ ವರ್ಗಾಯಿಸಿದ್ದಾರೆ. ಗ್ರಾಮಸ್ಥರೊಂದಿಗೆ ಒಪ್ಪಂದ ಮಾಡಿಕೊಂಡು ಅಧಿಕಾರ ಹಸ್ತಾಂತರಿಸಿರುವ ಕೈಲಾಶಿ ಅವರಿಗೆ ಜಿಲ್ಲಾ ಪಂಚಾಯತ್ ಸಿಇಒ ಅಮನ್ ವೈಷ್ಣವ್ ಅವರು ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕೈಲಾಶಿ ಬಾಯಿ ಅವರು ತಮ್ಮ ಸರಪಂಚ್ ಹಕ್ಕುಗಳನ್ನು ಸುರೇಶ್ ಎಂಬಾತನಿಗೆ ಹಸ್ತಾಂತರಿಸಿದ್ದಾರೆ ಎಂಬ ದೂರು ಬಂದಿದೆ. ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 40ರ ಅಡಿಯಲ್ಲಿ ಸರಪಂಚ್ ಸ್ಥಾನದಿಂದ ಕೈಲಾಶಿ ಅವರನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕೂ ಮುನ್ನ, ಆರೋಪಗಳ ಬಗ್ಗೆ ಕೈಲಾಶಿ ಅವರಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ನೀಡಲಾಗಿದೆ. ಗ್ರಾಮ ಪಂಚಾಯತಿ ಕಾರ್ಯದರ್ಶಿಗೂ ಶೋಕಾಸ್ ನೋಟಿಸ್‌ ಜಾರಿಗೊಳಿಸಲಾಗಿದೆ. ಉತ್ತರಗಳು ಬಂದ ಬಳಿಕ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಅಮನ್ ವೈಷ್ಣವ್ ಹೇಳಿದ್ದಾರೆ.

Advertisements

ಕೈಲಾಶಿ ಬಾಯಿ ಅವರು ಸಹಿ ಮಾಡಿರುವ ಸ್ಟಾಂಪ್ ಪೇಪರ್‌ನ ಛಾಯಾಚಿತ್ರವನ್ನು ಪಡೆದಿದ್ದೇವೆ. ಆದರೆ ಉತ್ತರ ಬಂದ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಹೇಳಿದ್ದಾರೆ.

ಜನವರಿ 24ರಂದು ಕೈಲಾಶಿ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಒಪ್ಪಂದದ ಪ್ರಕಾರ, ಸರಪಂಚ್ ಕೈಲಾಶಿ ಬಾಯಿ ಕಛಾವಾ ಅವರು ದಾತಾ ಗ್ರಾಮದ ನಿವಾಸಿ ಸುರೇಶ್ ಗರಸಿಯಾ ಅವರಿಗೆ ತಮ್ಮ ಸರಪಂಚ್‌ ಹಕ್ಕುಗಳನ್ನು ಹಸ್ತಾಂತರಿಸಲು ಒಪ್ಪಿಗೆ ನೀಡಿದ್ದಾರೆ ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X