ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

Date:

Advertisements

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ ನೇತಾರ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ ವಿಜಯಕುಮಾರ್ ಹೇಳಿದರು.

ಹಲವು ದಲಿತ ಸಂಘಟನೆಗಳ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರೊ.ಬಿ ಕೃಷ್ಣಪ್ಪ ಅವರ 86ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾಮಾಜಿಕ ರಕ್ಷಣೆಗಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅಸ್ತ್ರವನ್ನು ಶೋಷಿತರ ಕೈಗೆ ನೀಡಿದ ಕೀರ್ತಿ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ” ಎಂದು ಹೇಳಿದರು.

Advertisements

“1970ರ ದಶಕದಲ್ಲಿನ ಮೌಢ್ಯಾಚರಣೆ ಹೆಸರಿನಲ್ಲಿ ಶೋಷಿತರ ಶೋಷಣೆ, ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ದಲಿತರ ಭೂ ಕಬಳಿಕೆ ಪ್ರಕರಣಗಳಿಗೆ ಹೋರಾಟದ ಶಕ್ತಿಯಾಗಿ ನಿಂತವರು ಕೃಷ್ಣಪ್ಪ. ಅಂಬೇಡ್ಕ‌ರ್ ಅವರ ವಿಚಾರಧಾರೆಯಿಂದ ಪ್ರೇರಿತರಾಗಿದ್ದ ಕೃಷ್ಣಪ್ಪ, ರಾಜ್ಯದಲ್ಲಿ ದಸಂಸ ಸಂಘಟನೆ ಕಟ್ಟುವ ಮೂಲಕ ದಲಿತ ಮತ್ತು ಶೋಷಿತ ಸಮುದಾಯಕ್ಕೆ ಸಾಮಾಜಿಕ ರಕ್ಷಣೆ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

“ಕೃಷ್ಣಪ್ಪ ಅವರ ಆದರ್ಶ ಮತ್ತು ಹೋರಾಟದ ದೃಷ್ಟಿಕೋನವನ್ನು ಉಳಿಸಿಕೊಳ್ಳುವ ಜವಬ್ದಾರಿ ದಲಿತರ ಮೇಲಿದೆ. ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೌಲಭ್ಯ ಮತ್ತು ಒಡೆತನವನ್ನು ಧಕ್ಕಿಸಿಕೊಳ್ಳಲು ಹೋರಾಟವೇ ಪ್ರಮುಖ ಅಸ್ತ್ರ. ಹಾಗಾಗಿ ಹಲವು ಸಂಘಟನೆಗಳು ಒಗ್ಗೂಡಿ ಹೋರಾಟದ ಶಕ್ತಿಯನ್ನು ಗಟ್ಟಿಗೊಳಿಸಿಕೊಳ್ಳಬೇಕಾಗಿದೆ” ಎಂದರು.

ಕೆ ಬಿ ನಾಗರಾಜ್, ಅಂಜಿನಪ್ಪ, ಚನ್ನಿಗರಾಮಯ್ಯ, ಎನ್ ತಿಪ್ಪೇರುದ್ರಪ್ಪ, ಜಾಲಿ ಮಂಜು, ಎನ್ ಹೊನ್ನೂರಸ್ವಾಮಿ, ಡಿ.ಸೋಮಶೇಖರ್, ಹಳೇಟೌನ್ ಬದ್ರಿ, ಆರ್ ರುದ್ರಮುನಿ, ಜಗದೀಶ, ನಿಂಗರಾಜ್‌, ಡಿ ತಿಪ್ಪೇಸ್ವಾಮಿ, ಮಹಾಂತೇಶ್, ಎ ಮಾರುತಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X