ಕ್ರಿಕೆಟ್ | ಭಾರತ ತಂಡಕ್ಕೆ ಮತ್ತೆ ಕೊಹ್ಲಿ ‘ಕ್ಯಾಪ್ಟನ್’?

Date:

Advertisements

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ – ಗವಾಸ್ಕರ್ ಟ್ರೋಫಿ ಸೋಲಿನ ನಂತರ ಭಾರತ ತಂಡ ಟೆಸ್ಟ್ ನಾಯಕತ್ವ ಬದಲಾಗುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮುಂದಿನ ಐದಾರು ತಿಂಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟೆಸ್ಟ್‌ ಸರಣಿ ನಡೆಯಲಿದೆ. ಆ ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವ ಸಾಧ್ಯತೆಗಳಿಲ್ಲ. ಇದೀಗ, ವಿರಾಟ್‌ ಕೊಹ್ಲಿ ಅವರೇ ಮತ್ತೆ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡದ ನಾಯಕರಾಗಬಹುದು ಎಂದು ಹೇಳಲಾಗುತ್ತಿದೆ.

ರೋಹಿತ್ ಶರ್ಮಾ ನಾಯಕತ್ವ ತೊರೆದರೆ, ಸದ್ಯ ತಂಡದಲ್ಲಿರುವ ಉಳಿದ ಆಟಗಾರರಿಗೆ ನಾಯಕತ್ವವನ್ನು ನಿಭಾಯಿಸುವ ಸಾಮರ್ಥ್ಯವಿಲ್ಲ. ಅವರೆಲ್ಲರೂ ‘ಜೂನಿಯರ್‌’ಗಳಾಗಿದ್ದಾರೆ. ಅವರಾರು ನಾಯಕತ್ವ ಪಡೆಯಲು ಸಿದ್ದರಿಲ್ಲ. ಆಟದ ಒತ್ತಡದಿಂದಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ನಾಯಕತ್ವಕ್ಕೆ ಪರಿಗಣಿಸಲಾಗುತ್ತಿಲ್ಲ ಎಂದು ಹೇಳಲಾಗಿದೆ.

ಹೀಗಾಗಿ, ಕೊಹ್ಲಿಯನ್ನು ಭಾರತೀಯ ಟೆಸ್ಟ್ ತಂಡದ ನಾಯಕರನ್ನಾಗಿ ನೇಮಿಸಲು ಕೋಚ್ ಗೌತಮ್ ಗಂಭೀರ್ ಚರ್ಚೆ ನಡೆಸಿದ್ದಾರೆ. ಕೊಹ್ಲಿ ಜೊತೆಗೆ ಮಾತನಾಡಿದ್ದಾರೆ. ಆದರೆ, ಕೊಹ್ಲಿ ತಮ್ಮ ನಿಲುವು ತಿಳಿಸಿಲ್ಲ ಎಂದು ವರದಿಯಾಗಿದೆ.

Advertisements

“ವಿರಾಟ್ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಉತ್ತಮವಾಗಿ ಪ್ರದರ್ಶನ ನೀಡಿದೆ. ವಿಶೇಷವಾಗಿ ವಿದೇಶಿ ಮೈದಾನದಲ್ಲಿಯೂ ಅತ್ಯುತ್ತಮವಾಗಿ ಆಟವಾಡಿದೆ. ತಂಡಕ್ಕೆ ಕೊಹ್ಲಿಯಂತಹ ನಾಯಕನ ಅಗತ್ಯವಿದೆ. ಮುಂದಿನ ಟೆಸ್ಟ್ ಸರಣಿಗಳಿಗೆ ಹೊಸ ನಾಯಕರಾಗಲು ಆಟಗಾರರು ಸಜ್ಜಾಗಿಲ್ಲದ ಕಾರಣ, ಕೊಹ್ಲಿ ಸೂಕ್ತ ಆಯ್ಕೆಯಾಗಿದ್ದಾರೆ” ಎಂದು ಗಂಭೀರ್ ಹೇಳಿದ್ದಾರೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X