ಕೋಲಾರ | ಸಂವಿಧಾನದ ಆಶಯ ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ; ಡಾ.ರಾಜಣ್ಣ

Date:

Advertisements

ಸಂವಿಧಾನ ಆಶಯ ಸರ್ವರಿಗೂ ಧಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಉತ್ತರ ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಜಿ.ರಾಜಣ್ಣ ಅಭಿಪ್ರಾಯಪಟ್ಟರು.

ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ, ಚಿಂತಾಮಣಿ ಸತ್ವ ಸಂಸ್ಥೆ ಹಾಗೂ ಮಾಲೂರಿನ ಹೊಸ ಚಿಗುರು ಸಂಸ್ಥೆ ಸಹಯೋಗದದಲ್ಲಿ ಶನಿವಾರ ಆಯೋಜಿಸಿದ್ದ “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತ ಅರಿವು” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೊಸ ಚಿಗುರು ಸಂಸ್ಥೆ12

ಕವಿ ಮತ್ತು ಕನ್ನಡ ಉಪನ್ಯಾಸಕ ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನವೆಂಬುದು ಜನಪದವಾಗಬೇಕು. ಜನರು ಸಂವಿಧಾನವನ್ನು ಸಂಭ್ರಮಿಸಬೇಕು. ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹುಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ ಎಂದು ಹೇಳಿದರು.

Advertisements

ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಫೆ.10ರಂದು ರೈತ ಸಂಘ ಬೃಹತ್‌ ಪ್ರತಿಭಟನೆ

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ, ಅನ್ಯಾಯ, ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ಹೇಳಿದರು.

ಇದೇ ವೇಳೆ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ನವೀನ್, ಚಲಪತಿ ಹಾಗೂ ಪ್ರದೀಪ್ ತಂಡ “ಭಾರತ ಕಥಾ” ಎಂಬ ವಿಷಯದ ಕುರಿತು ಸಂವಿಧಾನ ಹಾಡುಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಹೊಸ ಚಿಗುರು ಸಂಸ್ಥೆ1

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಬೆಂಗಳೂರು ಉತ್ತರ ವಿವಿ ಸ್ನಾತಕೋತರ ಕೇಂದ್ರದ ನಿರ್ದೇಶಕ ಪ್ರೊ.ಕುಮುದ ಡಿ ಕಾರ್ಯಕ್ರಮದ ಕುರಿತು ಮಾತನಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಸಮಾಜಕಾರ್ಯ ವಿಭಾಗದ ಸಂಯೋಜಕರಾದ ಡಾ.ಗುಂಡಪ್ಪ ದೇವಿಕೇರಿ, ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕರಾದ ಡಾ.ಪಾರ್ವತಿ, ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಸ್ನಾತಕೋತ್ತರ ಕೇಂದ್ರದ ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X