ರಾಯಚೂರು | ನೈಸರ್ಗಿಕ ಸಂಪತ್ತು ರಕ್ಷಿಸುವಲ್ಲಿ ಕೂಲಿ ಕಾರ್ಮಿಕರ ಪಾತ್ರ ಅಪಾರ: ಚಂದ್ರಶೇಖರ್ ಪವಾರ

Date:

Advertisements

ಮನರೇಗಾ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಗ್ರಾಮೀಣ ಪ್ರದೇಶದ ನೈಸರ್ಗಿಕ ಸಂಪತ್ತು ರಕ್ಷಿಸುವಲ್ಲಿ ಅಪಾರ ಶ್ರಮವಹಿಸುತ್ತಾರೆ. ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಗೆ ಮುಂದಾಗಬೇಕು ಎಂದು ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ ಹೇಳಿದರು.

ತಾಲೂಕಿನ ಗಿಲ್ಲೇಸುಗೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ತಾಲೂಕು ಮಟ್ಟದ ಮನರೇಗಾ ಯೋಜನೆ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.

“ಪ್ರತಿಯೊಬ್ಬ ಕೂಲಿಕಾರ್ಮಿಕ ತಾಳ್ಮೆ, ಸಹಬಾಳ್ವೆ ಮತ್ತು ಜ್ಞಾನದೊಂದಿಗೆ ತನ್ನ ಜವಾಬ್ದಾರಿಯನ್ನು ಅರಿತುಕೊಂಡು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ನೆಲ, ಜಲ, ಪರಿಸರ ಸಂರಕ್ಷಣೆಗಾಗಿ ಹಾಗೂ ಸಂಪತ್ತನ್ನು ಉಳಿಸಿ ಬೆಳೆಸಲು ಸದಾ ಪ್ರಯತ್ನ ಮಾಡಬೇಕು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಜಮೀನು ಹೆದ್ದಾರಿ ಪಾಲು; ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ

ಮನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಿ ಗ್ರಾಮೀಣಾಭಿವೃದ್ಧಿ ಕೊಡುಗೆ ನೀಡಲು ಸಹಕರಿಸಬೇಕು ಎಂದ ಅವರು ಬಳಿಕ ತರಬೇತಿಯಲ್ಲಿ ಹಾಜರಾದ ಕೂಲಿ ಕಾರ್ಮಿಕರಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಐಇಸಿ ಧನರಾಜ, ಶಂಕಗೌಡ, ಜಯರಾಜ, ಕೂಲಿ ಕಾರ್ಮಿಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X