“ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.
ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿಯಾಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ. ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ತ್ಯಾಗಮಯಿ ರಮಾಬಾಯಿಯನ್ನು ಸ್ಮರಿಸಿಕೊಳ್ಳಬೇಕು: ಡಾ. ಹಣಮಂತರಾವ್ ದೊಡ್ಡಮನಿ
ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
