ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆಹೋದ ಉಡುಪಿ ವಕೀಲರ ಸಂಘ!

Date:

Advertisements

ಉಡುಪಿಯ ವಕೀಲರ ಸಂಘವು ಸಂಘದ ಉದ್ಧಾರಕ್ಕಾಗಿ ಹಾಗೂ ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆ ಹೋಗಿದ್ದಾರೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್ ಅವರ ಹೆಸರಿನಲ್ಲಿ ಪೋಸ್ಟ್ ಒಂದನ್ನು ಹಂಚಲಾಗುತ್ತಿದ್ದು, ಫೆ.10ರ ಸೋಮವಾರ ಬೆಳಗ್ಗೆ 8ಕ್ಕೆ ಸ್ಥಳಾಂತರಗೊಂಡಿರುವ ವಕೀಲರ ಸಂಘದಲ್ಲಿ ಗಣಹೋಮ ಹಮ್ಮಿಕೊಂಡಿರುವುದಾಗಿ ತಿಳಿಸಲಾಗಿದೆ.

ವೈರಲ್ ಆಗಿರುವ ಪೋಸ್ಟರ್‌ನಲ್ಲಿ, “ಉಡುಪಿ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡ ವಕೀಲರ ಸಂಘದಲ್ಲಿ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಹಾಗೂ ತಮ್ಮ ಸ್ವಾರ್ಥ ಸಾಧನೆಗಾಗಿ ವಿನಾಕಾರಣ ಸುಳ್ಳು ಆರೋಪ ಹೊರಿಸಿ ಕಿರುಕುಳ ನೀಡುತ್ತಾ ಸಂಘಕ್ಕೆ ಅಹಿತ ಬಯಸುವ ಸಮಸ್ತ ದುಷ್ಟ ಶಕ್ತಿಗಳ ನಿವಾರಣೆಗಾಗಿ ದಿನಾಂಕ 10.2.2025ನೇ ಸೋಮವಾರ ಬೆಳಗ್ಗೆ 8ಕ್ಕೆ ಸರಿಯಾಗಿ ಸ್ಥಳಾಂತರಿತ ವಕೀಲರ ಸಂಘದಲ್ಲಿ “ಗಣಹೋಮ” ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಸದಸ್ಯರು ಪಾಲ್ಗೊಂಡು ವಿಘ್ನೇಶ್ವರನ ಕೃಪೆಗೆ ಪಾತ್ರರಾಗಬೇಕಾಗಿ ಕೋರುತ್ತಿದ್ದೇವೆ” ಎಂದು ಉಲ್ಲೇಖಿಸಲಾಗಿದೆ.

Advertisements
1003366822
ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಪೋಸ್ಟರ್

ಕಾನೂನಿನ ಶಿಕ್ಷಣ ಪಡೆದು, ಮೌಢ್ಯತೆ ದೂರ ಮಾಡಬೇಕಾದ ವಕೀಲರೇ, ‘ತಮ್ಮ ಸಂಘದ ವಿರುದ್ಧದ ದುಷ್ಟ ಶಕ್ತಿಯನ್ನು ನಿವಾರಿಸುವ ಉದ್ದೇಶಕ್ಕಾಗಿ’ ಎಂದು ಉಲ್ಲೇಖಿಸಿ ಗಣಹೋಮ ಹಮ್ಮಿಕೊಂಡಿರುವುದು ಈಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಇದನ್ನು ಪ್ರಶ್ನಿಸುತ್ತಿದ್ದಾರೆ.

ವಕೀಲರ ಸಂಘಕ್ಕೆ ಅಹಿತ ಬಯಸುತ್ತಿರುವ ದುಷ್ಟ ಶಕ್ತಿಗಳು ಯಾರು? ಆ ದುಷ್ಟ ಶಕ್ತಿಗಳು ಸಂಘಕ್ಕೆ ಏನು ಮಾಡಿದೆ ಎಂಬುದನ್ನು ಉಡುಪಿ ವಕೀಲರ ಸಂಘವೇ ಉತ್ತರಿಸಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X