ಮೋದಿ ಅಮೆರಿಕದಿಂದ ವಾಪಸ್ಸಾದ ನಂತರ ದೆಹಲಿಯಲ್ಲಿ ಸರ್ಕಾರ ರಚನೆ

Date:

Advertisements

70 ಸದಸ್ಯಬಲದ ದೆಹಲಿ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸುಮಾರು 27 ವರ್ಷಗಳ ಬಳಿಕ ಗದ್ದುಗೆ ಹಿಡಿದಿದೆ. ಆದರೆ ಸರ್ಕಾರ ರಚನೆ ಹಾಗೂ ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಸುಮಾರು ಒಂದು ವಾರದಷ್ಟು ವಿಳಂಬವಾಗಲಿದೆ.

ಬಿಜೆಪಿ ದೆಹಲಿ ಘಟಕದ ಮೂಲಗಳ ಪ್ರಕಾರ, ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ದೆಹಲಿಯ ನೂತನ ಮುಖ್ಯಮಂತ್ರಿ ಹೆಸರನ್ನು ರಾಷ್ಟ್ರಪತಿ ಅನುಮೋದಿಸಬೇಕಾಗುತ್ತದೆ.

“ಪಕ್ಷ ಸಿಎಂ ಹೆಸರನ್ನು ಅಂತಿಮಪಡಿಸಿದ ಬಳಿಕ ರಾಷ್ಟ್ರಪತಿಗಳು ಲೆಫ್ಟಿನೆಂಟ್ ಗವರ್ನರ್ ಅವರ ಶಿಫಾರಸ್ಸಿನ ಮೇರೆಗೆ ಹೊಸ ಮುಖ್ಯಮಂತ್ರಿಯನ್ನು ನೇಮಕ ಮಾಡುತ್ತಾರೆ. ಇವರ ಸಚಿವ ಸಂಪುಟ ವಿಧಾನಸಭೆಯಲ್ಲಿ ಸಾಂಘಿಕ ಹೊಣೆಗಾರಿಕೆಯನ್ನು ಹೊಂದಿರುತ್ತದೆ. ಇದಕ್ಕೆ 2-3 ದಿನಗಳ ಕಾಲಾವಕಾಶ ಬೇಕು” ಎಂದು ಮೂಲಗಳು ಸ್ಪಷ್ಟಪಡಿಸಿವೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಇದಾದ ಬಳಿಕ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಇತರ ಬಿಜೆಪಿ ಆಡಳಿತದ ರಾಜ್ಯಗಳಂತೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.ಪ್ರಧಾನಿ ಈ ತಿಂಗಳ 12-13ರಂದು ಅಮೆರಿಕ ಭೇಟಿ ನೀಡಲಿದ್ದು, ಈ ಕಾರಣದಿಂದ ಪ್ರಮಾಣವಚನ ಸ್ವೀಕಾರ ಫೆಬ್ರುವರಿ 15ರ ಬಳಿಕ ನಡೆಯಲಿದೆ ಎಂದು ಮೂಲಗಳು ಬಹಿರಂಗಪಡಿಸಿವೆ.

ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿರೀಕ್ಷೆ ಇದ್ದು, ಜಾತಿ, ಅನುಭವ ಹಾಗೂ ರಾಜಕೀಯ ಕಾರ್ಯತಂತ್ರದ ಸಮತೋಲನಕ್ಕೆ ಕರಸತ್ತು ಮಾಡಲಿದೆ.ಈ ಚುನಾವಣೆಯ ಫಲಿತಾಂಶವು ಬಿಜೆಪಿಯ ಸಾಂಪ್ರದಾಯಿಕ ಮತ ಬ್ಯಾಂಕ್ ಎನಿಸಿದ ಪಂಜಾಬಿಗಳು, ಬನಿಯಾಗಳು ಹಾಗೂ ಜುಗ್ಗಿಗಳಲ್ಲಿ ವಾಸಮಾಡುವವರ ಜತೆಗೆ ಇತರರು ಕೂಡ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಮತ ಹಾಕಿರುವುದನ್ನು ದೃಢಪಡಿಸಿದೆ.

ನವದೆಹಲಿ ಸಂಸದೀಯ ಕ್ಷೇತ್ರದಲ್ಲಿ ಏಳು ಸ್ಥಾನಗಳನ್ನು ಗೆಲ್ಲುವ ಮೂಲಕ ಜನ ನಮ್ಮ ಮೇಲೆ ವಿಶ್ವಾಸವಿರಿಸಿದ್ದಾರೆ ಎನ್ನುವುದು ದೃಢಪಟ್ಟಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪಕ್ಷ ಸಿಎಂ ಹುದ್ದೆಗೆ ವ್ಯಕ್ತಿಯನ್ನು ಆಯ್ಕೆ ಮಾಡಲಿದೆ ಎಂದು ಮೂಲಗಳು ವಿವರಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X