ಕಲಬುರಗಿ | ಕೆಕೆಆರ್‌ಡಿಬಿ ಶೈಕ್ಷಣಿಕ ಸುಧಾರಣಾ ಸಮಿತಿ ಅಧ್ಯಕ್ಷರಾಗಿ ಛಾಯಾ ದೇಗಾಂವಕರ್‌ ನೇಮಕ

Date:

Advertisements

ಕಲ್ಯಾಣ ಕರ್ನಾಟ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸುಧಾರಣಾ ತಜ್ಞರ ಸಮಿತಿ ಪುನರ್ ರಚಿಸಿ, ಡಾ.ಛಾಯಾ ದೇಗಾಂವಕರ ಅಧ್ಯಕ್ಷ ನೇತೃತ್ವದ 8 ಜನ ಸದಸ್ಯರು ಹೊಂದಿರುವ ಶಿಕ್ಷಣ ತಜ್ಞರ ಸಮಿತಿ ಪುನರ್ ರಚಿಸಲಾಗಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ 11 ಮಂದಿ ಶಿಕ್ಷಣ ತಜ್ಞರ ಪಟ್ಟಿಯ ಪ್ರಸ್ತಾವವನ್ನು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದರು. ಪ್ರಸ್ತಾವವನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಒಬ್ಬರು ಅಧ್ಯಕ್ಷರು ಹಾಗೂ ಏಳು ಮಂದಿ ಸದಸ್ಯರನ್ನು ಆಯ್ಕೆ ಮಾಡಿ ಅನುಮೋದನೆ ನೀಡಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿದ್ದ ಛಾಯಾ ದೇಗಾಂವಕರ್‌ ಅವರು ಅಧ್ಯಕ್ಷರಾಗಿದ್ದರೆ, ಬೀದರ್‌ನ ಡಾ.ಅಬ್ದುಲ್ ಖದೀರ್, ಮಲ್ಲಿಕಾರ್ಜುನ ಎಂ.ಎಸ್‌., ಬಳ್ಳಾರಿಯ ಫ್ರಾಂಸಿಸ್ ಬಾಷ್ಯಮ್, ಕಲಬುರಗಿಯ ಎನ್‌.ಬಿ.ಪಾಟೀಲ, ರುದ್ರೇಶ್‌ ಎಸ್‌., ಯಶವಂತ ಹರಸೂರ್ ಹಾಗೂ ನಾಗಾಬಾಯಿ ಬಿ.ಬುಳ್ಳಾ ಅವರು ಸದಸ್ಯರಾಗಿದ್ದಾರೆ.

Advertisements

ಈ ಸಮಿತಿಯು ಪ್ರತಿ ತಿಂಗಳು ಅಕ್ಷರ ಆವಿಷ್ಕಾರ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಸೂಕ್ತ ಸಲಹೆ, ಮಾರ್ಗದರ್ಶನಗಳನ್ನು ಕೆಕೆಆರ್‌ಡಿಬಿಗೆ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಗುರುರಾಜ ಕರಜಗಿ ನೇತೃತ್ವದ ಸಮಿತಿಗೆ ತೀವ್ರ ವಿರೋಧ:

ಈ ಹಿಂದೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ನೇತೃತ್ವದಲ್ಲಿ ಆರು ಜನ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಕರಜಗಿ ಜತೆಗೆ ಸದಸ್ಯರಾಗಿ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಡಾ. ರುದ್ರೇಶ್, ಹಿರೇಮಠ ಸ್ವಾಮೀಜಿ, ಬಳ್ಳಾರಿಯ ಫಾದರ್ ಫ್ರಾನ್ಸಿಸ್, ಬೀದರ್‌ನ ಶಹೀನ್ ವಿದ್ಯಾಸಂಸ್ಥೆಗಳ ಮುಖ್ಯಸ್ಥ ಅಬ್ದುಲ್ ಖದೀರ್ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಎನ್.ಬಿ. ಪಾಟೀಲ ಅವರನ್ನು ಕೆಕೆಆರ್‌ಡಿಬಿ ಅಧ್ಯಕ್ಷರು ಆಯ್ಕೆ ಮಾಡಿ ಘೋಷಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಫೈನಾನ್ಸ್‌ ಕಂಪನಿಯಿಂದ ಮನೆಗೆ ಬೀಗ: ವಿಶೇಷ ಚೇತನ ಮಗುವಿನೊಂದಿಗೆ ಬೀದಿಗೆ ಬಿದ್ದ ಕುಟುಂಬ!

ಆರ್‌ಎಸ್‌ಎಸ್ ಹಿನ್ನೆಲೆಯ ಗುರುರಾಜ ಕರಜಗಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು. ಈಗ ಅವರನ್ನು ಕೈಬಿಟ್ಟು ಸಮಿತಿ ಪುನರ್‌ ರಚಿಸಿ ಛಾಯಾ ದೇಗಾಂವಕರ್ ಅವರನ್ನು ನೇಮಕಮಾಡಿ ಜವಾಬ್ದಾರಿ ವಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X