ಕೊಲೆ ಆರೋಪಿ ಬಿಡುಗಡೆ ಮಾಡುವಂತೆ ರಾಷ್ಟ್ರಪತಿ ಹೆಸರಿನಲ್ಲೇ ಜೈಲಿಗೆ ನಕಲಿ ಪತ್ರ

Date:

Advertisements

ಕೊಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿ ಭಾರತದ ರಾಷ್ಟ್ರಪತಿ ಹೆಸರಿನಲ್ಲಿಯೇ ಜೈಲಿಗೆ ನಕಲಿ ಪತ್ರ ಬರೆದಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾ ಕಾರಾಗೃಹಕ್ಕೆ ರಾಷ್ಟ್ರಪತಿ ಹೆಸರಿನಲ್ಲಿ ಆದೇಶ ಪತ್ರ ಬಂದಿದೆ. ಆದರೆ, ಜೈಲು ಅಧಿಕಾರಿಗಳು ಪತ್ರದ ಬಗ್ಗೆ ಅನುಮಾನಗೊಂಡು ತನಿಖೆ ನಡೆಸಿದ್ದು, ಅದು ನಕಲಿ ಆದೇಶವೆಂದು ಕಂಡುಹಿಡಿದಿದ್ದಾರೆ.

ಕೊಲೆ ಆರೋಪಿ ಅಜಯ್ ಎಂಬಾತನ ವಿರುದ್ಧ ಜನಕಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆತನನ್ನು ಸಹಾರನ್‌ಪುರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು. ಇತ್ತೀಚೆಗೆ, ಆತನನ್ನು ಬಿಡುಗಡೆ ಮಾಡುವಂತೆ ರಾಷ್ಟ್ರಪತಿ ಹೆಸರಿನಲ್ಲಿ ಜೈಲಿಗೆ ನಕಲಿ ಪತ್ರ ಬಂದಿದೆ.

Advertisements

“ಜೈಲು ಆಡಳಿತವು ‘ರಾಷ್ಟ್ರಪತಿ ನ್ಯಾಯಾಲಯ’ದ ಹೆಸರಿನಲ್ಲಿ ಬಂದ ಆದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು. ಪತ್ರವೂ ಅನುಮಾನಾಸ್ಪದವಾಗಿತ್ತು. ಪತ್ರದ ಬಗ್ಗೆ ಪರಿಶೀಲನೆ ನಡೆಸಿದಾಗ, ‘ರಾಷ್ಟ್ರಪತಿ ನ್ಯಾಯಾಲಯ’ ಎಂಬುದೇ ಅಸ್ವಿತ್ವದಲ್ಲಿಲ್ಲ ಎಂಬುದು ಗೊತ್ತಾಯಿತು. ಯಾರೋ ನಕಲಿ ಪತ್ರ ಬರೆದು, ಜೈಲು ಅಧಿಕಾರಿಗಳು ಯಾಮಾರಿಸಲು ಪ್ರಯತ್ನಿಸಿದ್ದಾರೆ” ಎಂದು ಜೈಲು ಅಧಿಕಾರಿ ಸತ್ಯಪ್ರಕಾಶ್ ಹೇಳಿದ್ದಾರೆ.

ರಾಷ್ಟ್ರಪತಿ ಹೆಸರಿನಲ್ಲಿ ನಕಲಿ ಪತ್ರ ಬಂದ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜೈಲು ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಜನಕಪುರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X