ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

Date:

Advertisements

12 ವರ್ಷದ ಹುಡುಗನೋರ್ವನ ಕುತ್ತಿಗೆಯ ಮೂಲಕ ಎದೆಯ ತನಕ ಹೊಕ್ಕಿದ್ದ ತೆಂಗಿನ ಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯರು ಬಾಲಕನ ಜೀವ ಉಳಿಸುವಲ್ಲಿ ಯಶಸ್ಸು ಕಂಡಿದ್ದಾರೆ.

ಅಸ್ಸಾಂ ರಾಜ್ಯದ ಗುವಾಹಟಿ ಮೂಲದವನಾದ ಬಾಲಕ ಕಮಲ್ ಹುಸೇನ್(12) ಎಂಬಾತನ ಪೋಷಕರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ(ಶನಿವಾರ) ಸಂಜೆಯ ಬಾಲಕ ಮನೆಯ ಬಳಿ ಆಟವಾಡುತ್ತಿದ್ದಾಗ ಹತ್ತಿರವೇ ಇದ್ದ ತೆಂಗಿನಮರದ ಗರಿಯೊಂದು ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು.

ಅವಘಡದಿಂದಾಗಿ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್‌ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಶನಿವಾರ ರಾತ್ರಿ 6.30ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ರಾತ್ರಿ 12.15ರ ಸುಮಾರಿಗೆ ವೆನ್ಲಾಕ್‌ಗೆ ಕರೆತರಲಾಗಿತ್ತು.

Advertisements
ಬ್ಲೇಡ್
ವೈದ್ಯರ ತಂಡ ಹೊರತೆಗೆದ ಭಾಗ

ಈ ಪ್ರಕರಣವನ್ನು ಕೂಡಲೇ ಗಂಭೀರವಾಗಿ ಪರಿಗಣಿಸಿದ ವೆನ್ಲಾಕ್ ಆಸ್ಪತ್ರೆಯ ಎದೆ ಮತ್ತು ರಕ್ತನಾಳಗಳ ಶಸ್ತ್ರಚಿಕಿತ್ಸಕರಾದ (Cardiothoracic and Vascular Surgery) ಡಾ. ಸುರೇಶ್ ಪೈ ನೇತೃತ್ವದ ತಂಡವು, ವೈದ್ಯಕೀಯ ಕೌಶಲ್ಯದ ಮೂಲಕ 12 ವರ್ಷದ ಹುಡುಗನ ಎದೆಗೆ ತೆಂಗಿನ ಮರದ ಗರಿ ಹಾಗೂ ಜೊತೆಗೆ ಹೊಕ್ಕಿದ್ದ ಸ್ಟೀಲ್‌ ಚೈನ್‌ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಬಾಲಕನ ಎದೆಯ ಎಕ್ಸ್‌ರೇ

ಈ ಬಗ್ಗೆ ಈದಿನ ಡಾಟ್‌ ಕಾಮ್‌ನೊಂದಿಗೆ ಮಾತನಾಡಿದ ಡಾ. ಸುರೇಶ್ ಪೈ, “ಅಂದಾಜು 20 ಸೆಂ.ಮೀಟರ್ ಉದ್ದದ ದೊಡ್ಡ ಮರದ ತುಂಡು ಮತ್ತು ಬ್ಲೇಡ್‌ನಂತಹ ಡಿಸೈನ್ ಇರುವ ಸ್ಟೀಲ್‌ ಚೈನ್‌ ಬಾಲಕನ ಎದೆಯ ತನಕ ಹೊಕ್ಕಿತ್ತು. ಸುಮಾರು ಎರಡು ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿ ಹೊರತೆಗೆಯಲಾಗಿದೆ. ಬಾಲಕ ಈಗ ಐಸಿಯುನಲ್ಲಿದ್ದು, ಸುಧಾರಿಸಿಕೊಳ್ಳುತ್ತಿದ್ದಾನೆ” ಎಂದು ಮಾಹಿತಿ ನೀಡಿದರು.

ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಅಧೀಕ್ಷಕರಾದ ಡಾ. ಶಿವಪ್ರಕಾಶ್ ಮಾತನಾಡಿ, “ಶನಿವಾರ ರಾತ್ರಿ 6.30ರ ಸುಮಾರಿಗೆ ಈ ಅವಘಡ ಸಂಭವಿಸಿತ್ತು ಎಂದು ಪೋಷಕರು ಮಾಹಿತಿ ನೀಡಿದ್ದಾರೆ. ರಾತ್ರಿ 12.15ರ ಸುಮಾರಿಗೆ ವೆನ್ಲಾಕ್‌ಗೆ ಕರೆತರಲಾಗಿತ್ತು. ಮಧ್ಯರಾತ್ರಿ 1.30ರಿಂದ ಮುಂಜಾನೆ 3.30ರವರೆಗೆ ಶಸ್ತ್ರಚಿಕಿತ್ಸೆ ನಡೆಸಿರುವ ಡಾ. ಸುರೇಶ್ ಪೈ ನೇತೃತ್ವದ ನಮ್ಮ ವೈದ್ಯರ ತಂಡವು ಬಾಲಕನ ಜೀವ ಉಳಿಸುವಲ್ಲಿ ಸಫಲರಾಗಿದ್ದಾರೆ” ಎಂದು ಈದಿನ ಡಾಟ್‌ ಕಾಮ್‌ಗೆ ತಿಳಿಸಿದರು.

“ನಮ್ಮ ವೈದ್ಯರ ತಂಡ ನಡೆಸಿರುವುದು ಬಹಳ ಅಪರೂಪದ ಶಸ್ತ್ರಚಿಕಿತ್ಸೆ. ಒಂದು ವೇಳೆ ಇದು ಖಾಸಗಿ ಆಸ್ಪತ್ರೆಯಲ್ಲಿ ನಡೆಸಿದ್ದಿದ್ದರೆ 10 ಲಕ್ಷದವರೆಗೆ ಖರ್ಚಾಗುತ್ತಿತ್ತು. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆಯನ್ನು ಯಾವುದೇ ಖರ್ಚಿಲ್ಲದೆ ನಡೆಸಲಾಗಿದೆ” ಎಂದು ತಿಳಿಸಿದರು.

WhatsApp Image 2025 02 09 at 3.53.38 PM
ಕುತ್ತಿಗೆಯ ಮೂಲಕ ಹೋಗಿದ್ದ ತೆಂಗಿನಮರದ ಗರಿಯ ಭಾಗ

“ಮರದ ತುಂಡು ಮತ್ತು ಚೈನನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ನಂತರ ಹುಡುಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಸಿಟಿವಿಎಸ್ ವಿಭಾಗದ ಇಡೀ ತಂಡದ ಅಸಾಧಾರಣ ಕೌಶಲ್ಯವು ಪ್ರಶಂಸೆಗೆ ಅರ್ಹವಾದದ್ದು. 12 ವರ್ಷದ ಬಾಲಕನ ಜೀವವನ್ನು ಉಳಿಸಲು ಗಮನಾರ್ಹ ಪ್ರಯತ್ನ ನಡೆಸಿದ್ದಕ್ಕಾಗಿ ಇಡೀ ತಂಡ, ಶಸ್ತ್ರಚಿಕಿತ್ಸಾ ವಿಭಾಗದ ಸಿಬ್ಬಂದಿ ಮತ್ತು ಅರಿವಳಿಕೆ ತಂಡವನ್ನೂ ಕೂಡ ಅಭಿನಂದಿಸುತ್ತೇನೆ” ಎಂದು ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಫೈನಾನ್ಸ್‌ ಕಂಪನಿಯಿಂದ ಮನೆಗೆ ಬೀಗ: ವಿಶೇಷ ಚೇತನ ಮಗುವಿನೊಂದಿಗೆ ಬೀದಿಗೆ ಬಿದ್ದ ಕುಟುಂಬ!

ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿದ ಬಾಲಕನ ಕುಟುಂಬದ ಸದಸ್ಯರಾದ ತಸರ್ ಅಲಿ, “ನಿನ್ನೆ ಸಂಜೆ 6.30ರ ವೇಳೆ ಮನೆಯ ಸಮೀಪದಲ್ಲಿ ಹುಸೇನ್ ಆಟವಾಡುತ್ತಿದ್ದ. ಈ ವೇಳೆ ದಿಢೀರನೇ ಬಿದ್ದ ತೆಂಗಿನ ಮರದ ಗರಿ ನೇರವಾಗಿ ಕುತ್ತಿಗೆ ಭಾಗಕ್ಕೆ ನುಗ್ಗಿತ್ತು. ಕೂಡಲೇ ಎಸ್ಟೇಟ್ ಮಾಲೀಕರ ವಾಹನದಲ್ಲಿ ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದೆವು. ಅವರು ಕೂಡಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆ ತರುವಂತೆ ಸೂಚಿಸಿದ್ದಕ್ಕೆ ಇಲ್ಲಿ ಕರೆ ತಂದೆವು. ವೈದ್ಯರು ಸರ್ಜರಿ ನಡೆಸಿ, ಪ್ರಾಣ ಉಳಿಸಿದ್ದಾರೆ” ಎಂದು ತಿಳಿಸಿದರು.

ಅಪರೂಪದ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ತಮ್ಮ ಮಗನ ಜೀವ ಉಳಿಸಿರುವ ವೆನ್ಲಾಕ್ ಆಸ್ಪತ್ರೆಯ ಎಲ್ಲ ವೈದ್ಯರಿಗೆ ಅಸ್ಸಾಂ ಮೂಲದ ಬಾಲಕನ ಪೋಷಕರಾದ ಅನ್ವರ್ ಹಾಗೂ ಅಸ್ಮಾ ಖಾತೂನ್ ಧನ್ಯವಾದ ಸಲ್ಲಿಸಿದ್ದಾರೆ.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X