ಬಾಲಿವುಡ್ ಸಂಗೀತ ನಿರ್ದೇಶಕ ಪ್ರೀತಮ್ ಕಚೇರಿಯಲ್ಲಿ 40 ಲಕ್ಷ ರೂ. ಕಳವು

Date:

Advertisements

ಬಾಲಿವುಡ್ ಸಂಗೀತ ಸಂಯೋಜಕ ಪ್ರೀತಮ್ ಚಕ್ರವರ್ತಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು 40 ಲಕ್ಷ ರೂ. ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ, ಅವರ ವ್ಯವಸ್ಥಾಪಕರು ಮಲಾಡ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಪೊಲೀಸರ ಪ್ರಕಾರ, ಶಂಕಿತ ಆರೋಪಿಯನ್ನು ಆಶಿಶ್ ಸಾಯಲ್ (32) ಎಂದು ಗುರುತಿಸಲಾಗಿದ್ದು, ಆತನ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎನ್ನಲಾಗಿದೆ.

ಈ ಘಟನೆಯು ಫೆಬ್ರವರಿ 4ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಸಂಭವಿಸಿದೆ. ನಿರ್ಮಾಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಗೋರೆಗಾಂವ್‌ನಲ್ಲಿರುವ ಸಂಗೀತ ಸಂಯೋಜಕ ಪ್ರೀತಮ್ ಅವರ ಸಂಗೀತ ಸ್ಟುಡಿಯೊ ಯೂನಿಮಸ್ ರೆಕಾರ್ಡ್ ಪ್ರೈವೇಟ್ ಲಿಮಿಟೆಡ್‌ಗೆ ಆಗಮಿಸಿ, 40 ಲಕ್ಷ ರೂ. ನಗದು ಹೊಂದಿರುವ ಬ್ಯಾಗ್‌ಅನ್ನು ಅವರ ವ್ಯವಸ್ಥಾಪಕ ವಿನೀತ್ ಚೆಡ್ಡಾಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಚೆಡ್ಡಾರೊಂದಿಗೆ ಸಾಯಲ್, ಅಹ್ಮದ್ ಖಾನ್ ಹಾಗೂ ಕಮಲ್ ದಿಶಾ ಕೂಡಾ ಉಪಸ್ಥಿತರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

“ನಗದು ಸ್ವೀಕರಿಸಿದ ವ್ಯವಸ್ಥಾಪಕರು, ಅದನ್ನು ಕಚೇರಿಯಲ್ಲಿದ್ದ ಟ್ರಾಲಿ ಬ್ಯಾಗ್‌ನಲ್ಲಿಟ್ಟಿದ್ದಾರೆ. ಇದರ ಬೆನ್ನಿಗೇ, ಕೆಲವು ದಾಖಲೆಗಳಿಗೆ ಪ್ರೀತಮ್ ಅವರ ಸಹಿ ಪಡೆಯಲು ಅದೇ ಕಟ್ಟಡದಲ್ಲಿರುವ ಪ್ರೀತಮ್ ಅವರ ನಿವಾಸಕ್ಕೆ ತೆರಳಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದರೆ, ಕಚೇರಿಗೆ ಮರಳಿ ಬಂದಾಗ, ತಾನು ನಗದು ಇಟ್ಟಿದ್ದ ಟ್ರಾಲಿ ಬ್ಯಾಗ್ ಕಾಣೆಯಾಗಿರುವುದನ್ನು ಚೆಡ್ಡಾ ಗಮನಿಸಿದ್ದಾರೆ. ಈ ಕುರಿತು ಅವರು ಮೊದಲಿಗೆ ಇತರ ಸಿಬ್ಬಂದಿಗಳನ್ನು ವಿಚಾರಿಸಿದಾಗ ಆ ಬ್ಯಾಗನ್ನು ಪ್ರೀತಮ್ ಅವರ ನಿವಾಸಕ್ಕೆ ಕೊಂಡೊಯ್ಯುವ ಸೋಗಿನಲ್ಲಿ ಸಾಯಲ್ ಅದನ್ನು ಕಚೇರಿಯಿಂದ ಹೊತ್ತೊಯ್ದರು ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X