ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ.
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು ತಂದೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ರಾತ್ರಿಯಾಗಿತ್ತು. ಇಷ್ಟು ತಡವಾಗಿ ಬಂದಿದ್ದಕ್ಕೆ ಎಂದು ಆತನನ್ನು ಪ್ರಶ್ನಿಸಿ ಬಾಲಕನ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ತೀವ್ರವಾಗಿ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಆತ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಆರೋಪಿ ಮದ್ಯ ಕುಡಿದಿದ್ದರು ಎಂದು ಹೇಳಲಾಗಿದೆ.
ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಮೇಲೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ. ತನಿಖೆ ಮುಂದುವರೆದಿದೆ ಎಂದರು.