ಸಿಎಂ ಆಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ

Date:

Advertisements
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ ಎಚ್ಡಿಕೆ
  • ಸಿದ್ದರಾಮಯ್ಯ ಗೌರ್ನಮೆಂಟ್‌ನಲ್ಲಿ ಕಾಸಿಗಾಗಿ ಪೋಸ್ಟಿಂಗ್ ಎಂದ ಮಾಜಿ ಸಿಎಂ

ನಾನು ಮುಖ್ಯಮಂತ್ರಿ ಆಗಿದ್ದಾಗ ಹಣ ಪಡೆದು ವರ್ಗಾವಣೆ ಮಾಡಿದ್ದೆ ಎನ್ನುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆ ಪಿ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗ ಅಧಿಕಾರಿಗಳ ಪೋಸ್ಟಿಂಗ್ ಗೆ ಯಾರು, ಎಲ್ಲಿ ಕೂತು ರೇಟ್ ಫಿಕ್ಸ್ ಮಾಡುತ್ತಿದ್ದಾರೆ ಎನ್ನುವುದನ್ನು ಅಧಿಕಾರಿಗಳೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಜತೆ ನಾನು ಸರ್ಕಾರ ಮಾಡಿದ್ದಾಗ ಕಾಂಗ್ರೆಸ್ ನವರು ಹೇಳಿದ ಮೇಲೆ ವರ್ಗಾವಣೆ ಮಾಡಬೇಕು ಎನ್ನುವ ಪರಿಸ್ಥಿತಿ ಇತ್ತು ಎಂದರು.

2018ರಲ್ಲಿ ಸಿಎಂ ಆಗಿದ್ದಾಗ ನನ್ನ ಸಂಪುಟದ ಸಚಿವರಾಗಿದ್ದ ಕಾಂಗ್ರೆಸ್ ನಾಯಕರೊಬ್ಬರು ಸೋಪ್ ಅಂಡ್ ಡಿಟರ್ಜಂಟ್ ಕಾರ್ಖಾನೆಗೆ ಅಧಿಕಾರಿ ಒಬ್ಬರನ್ನು ವರ್ಗ ಮಾಡುವಂತೆ ಕೇಳಿದ್ದರು. ಈ ವಿಷಯದಲ್ಲಿ ನಡೆದ ಗಲಾಟೆ ನನ್ನ ಸರಕಾರವನ್ನು ಬಲಿ ತೆಗೆದುಕೊಂಡಿತು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Advertisements

ಅಂದಿನಂತೆ ಇಂದಿನ ಸರ್ಕಾರದಲ್ಲೂ ವರ್ಗಾವಣೆ ದಂಧೆ ಆರಂಭವಾಗಿದೆ, ಕಾಸಿಗಾಗಿ ಇವರು ಪೋಸ್ಟಿಂಗ್ ಮಾಡುತ್ತಿದ್ದಾರೆ. ವಿದೇಶಿ ಪ್ರವಾಸದಲ್ಲಿರುವ ಮಂತ್ರಿಗೆ ಗೊತ್ತಿಲ್ಲದೆ ಸಿಎಂ ಒಬ್ಬ ಅಧಿಕಾರಿಯನ್ನು ಅವರ ಇಲಾಖೆಗೆ ಪೋಸ್ಟಿಂಗ್ ಮಾಡಿದ್ದಾರೆ. ಆತ ಅಲ್ಲಿಂದಲೇ ನಾನು ಬರೋವರೆಗೆ ಚಾರ್ಜ್ ತಗೋಬೇಡ ಎಂದು ಹೇಳಿದ್ದಾರಂತೆ, ಇದು ಇವರ ಸರ್ಕಾರದ ಕಾರ್ಯವೈಖೃರಿ, ಈಗ ನಡೆಯುತ್ತಿರುವುದು ʼವರ್ಗಾವಣೆ ಜ್ಯೋತಿʼ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

ತಾವೇ ಕಾಸಿಗಾಗಿ ವರ್ಗಾವಣೆ ದಂಧೆ ಮಾಡುತ್ತಿರುವವರು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಇನ್ನು ಸರ್ಕಾರದ ಪರ್ಸೆಂಟೇಜ್ ಆಡಳಿತದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಅವರು, ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?:ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರಕ್ಕೆ ಸಾಕ್ಷಿ: ಶೋಭಾ ಕರಂದ್ಲಾಜೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ 675 ಕೋಟಿ ಮೊತ್ತದ ಟೆಂಡರ್ ನೀಡಲಾಗಿತ್ತು. ಆದರೆ ಅದರ ಎಲ್ ಒಸಿ ಹಣ ಇನ್ನೂ ಬಿಡುಗಡೆ ಆಗಲಿಲ್ಲ. ಹೀಗೆ ಏಕೆ ಆಗುತ್ತಿದೆ ಎನ್ನುವುದು ಅನುಮಾನಕ್ಕೆ ಕಾರಣ. ಈಗ ಎಲ್ಒಸಿ ಬಿಡುಗಡೆ ಆಗಬೇಕು ಅಂದರೆ 5 ಪರ್ಸೆಂಟ್ ಕೊಡಲೇಬೇಕು ಎಂದು ಈ ಸರ್ಕಾರದವರು ಡಿಮ್ಯಾಂಡ್ ಇಟ್ಟಿದ್ದಾರೆ.

40 ಪರ್ಸೆಂಟ್ ಜತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್ ಕೊಟ್ರೆ ಹಣ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರಂತೆ. ಅಲ್ಲಿಗೆ ಇದು 45 ಪರ್ಸೆಂಟ್ ಸರಕಾರ ಎಂದಾಯಿತಲ್ವೆ? ಆಗಿರುವ ಕಾಮಗಾರಿಗಳಿಗೆ ಪರ್ಸಂಟೇಜ್ ಕೇಳುತ್ತಿದ್ದಾರೆ, ಇವರು ಸತ್ಯ ಹರಿಶ್ಚಂದ್ರರು ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಬಿಜೆಪಿ ಸರಕಾರದ ಬಗ್ಗೆ 40 ಪರ್ಸೆಂಟ್ ಬಗ್ಗೆ ಮಾತಾಡಿದ್ದರು ಇವರು. ಹಾದಿಬೀದಿಯಲ್ಲಿ ಜಾಗಟೆ ಹೊಡೆದುಕೊಂಡು ಪ್ರಚಾರ ಮಾಡಿದರು. ಈಗ ನೋಡಿದರೆ ಅಧಿಕಾರಿಗಳ ವರ್ಗಾವಣೆ, ಎಲ್ ಒಸಿ ದಂಧೆ ಶುರು ಮಾಡಿಕೊಂಡಿದ್ದಾರೆ. 40 ಪರ್ಸೆಂಟ್ ಎಂದು ಪುಂಗಿ ಬಿಟ್ಟ ಇವರು ಆ ಆರೋಪವನ್ನು ಸಾಬೀತು ಮಾಡಿದ್ರಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕನ್ನಡಿ (mirror) ಮುಂದೆ ನಿಂತುಕೊಂಡು ಮಾತನಾಡಯಾ.
    ನೀನೂ ನಿನ್ನ ಮಾತು ಸಾಕು.
    Election ಗು ಮುಂಚೆ ಏನು ಹೇಳಿದ್ದೋ ಅದನ್ನು ಮಾಡು…

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X