ಚಿಕ್ಕಮಗಳೂರು l ಎರಡು ಗುಂಪುಗಳ ನಡುವೆ ಗಲಾಟೆ; ಪ್ರಕರಣ ದಾಖಲು

Date:

Advertisements

ಅಪಘಾತ ಮಾಡಿ ಕಾರು ನಿಲ್ಲಿಸದೇ ಹೋದ ಚಾಲಕನನ್ನು ಪ್ರಶ್ನಿಸಿದ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹರಿಹರಪುರ ಸಮೀಪದಲ್ಲಿ ನಡೆದಿದೆ.

ಉಡುಪಿಯಿಂದ ಕೊಪ್ಪಕ್ಕೆ ಮುಸ್ಲಿಂ ಸಮುದಾಯದ ಕುಟುಂಬವೊಂದು ಕಾರ್ಯಕ್ರಮಕ್ಕೆಂದು ಕಾರಿನಲ್ಲಿ ಬಂದಿದ್ದರು. ಕುಟುಂಬವು ಕಾರ್ಯಕ್ರಮ ಮುಗಿಸಿ ಉಡುಪಿಗೆ ವಾಪಸ್ ಹೋಗುವಾಗ ಹರಿಹರಪುರ ಬಳಿ ಕಾರು ಹಾಗೂ ಬೈಕಿನ ನಡುವೆ ಸಣ್ಣ ಅಪಘಾತ ಸಂಭವಿಸಿದೆ. ಕಾರು ಬೈಕಿಗೆ ಡಿಕ್ಕಿಯಾದರೂ ಚಾಲಕ ಕಾರು ನಿಲ್ಲಿಸದೇ ಹೋಗಿದ್ದು, ಹರಿಹರಪುರ ಯುವಕರು ಶೃಂಗೇರಿಯ ಕೆಲ ಯುವಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ನಂತರ ಸ್ಥಳೀಯ ಯುವಕರು ಶೃಂಗೇರಿಯಲ್ಲಿ ಕಾರು ಅಡ್ಡ ಹಾಕಿ ಅಪಘಾತದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಶೃಂಗೇರಿ ಯುವಕರು ಕಾರಿನಲ್ಲಿದ್ದ ಉಡುಪಿ ಮೂಲದ ಕುಟುಂಬದವರ ಮೇಲೆ ಅವಾಚ್ಯ ಶಬ್ದ ಬಳಕೆ ಹಾಗೂ ಕೊಲೆ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಶೃಂಗೇರಿ ಯುವಕರ ಮೇಲೂ ಕೂಡ ಹಲ್ಲೆ ಮಾಡಿದ್ದಾರೆ ಎಂದು ಪ್ರತ್ಯಾರೋಪ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದ್ದು, ಹಲ್ಲೆಗೊಳಗಾದ ಉಡುಪಿ ಮೂಲದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಟ್ರ್ಯಾಕ್ಟರ್ ಪಲ್ಟಿ; ಕಾರ್ಮಿಕರ ಸ್ಥಿತಿ ಗಂಭೀರ

ಈ ಪ್ರಕರಣ ಕುರಿತು ಕೊಪ್ಪ ಹಾಗೂ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಎಸ್‌ಪಿ ವಿಕ್ರಂ ಅಮಟೆ ಘಟನೆಯ ಬಗ್ಗೆ ಪರಿಶೀಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X