ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ 89ನೇ ಜಯಂತಿ ಅಂಗವಾಗಿ ಮೈಸೂರಿನಲ್ಲಿ ಫೆಬ್ರವರಿ 13 ರಂದು ಜಿಲ್ಲಾ ರೈತ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮೈಸೂರಿನ ಟೌನ್ಹಾಲ್ನಲ್ಲಿ ಸಮಾವೇಶಕ್ಕೆ ಶಾಸಕ ದರ್ಶನ ಪುಟ್ಟಯ್ಯ ಚಾಲನೆ ನೀಡಲಿದ್ದಾರೆ. ಬಳಿಕ ಮಹಿಳಾ ಘಟಕದ ಕಾರ್ಯಾಧ್ಯಕ್ಷ ಯಧುಶೈಲ ಸಂಪತ್ ಸಂಘದ ಧ್ವಜಾರೋಹಣ ಮಾಡಲಿದ್ದಾರೆ. 12 ಗಂಟೆಗೆ ಮಾಜಿ ಶಾಸಕ, ಸಂಯುಕ್ತ ಮೋರ್ಚಾದ ರಾಷ್ಟ್ರೀಯ ಸಂಚಾಲಕ ಹಾಗೂ ಸಮಾಜವಾದಿ ಚಿಂತಕ ಡಾ. ಸುನೀಲಂ ಅವರು ಸಮಾವೇಶದ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಮಾವೇಶಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿ ಸಲಹೆಗಾರ ಬಿ ಆರ್ ಪಾಟೀಲ್, ಜಾಗೃತ ಕರ್ನಾಟಕ ಡಾ. ವಿ ವಾಸ್, ಕೃಷಿ ವಿಜ್ಞಾನ ಹಾಗೂ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ. ಪ್ರಕಾಶ ಕಮ್ಮರಡಿ ಸೇರಿದಂತೆ ಇತರರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಎಟಿಎಂ ಕಳ್ಳತನ ಪ್ರಕರಣದ ಆರೋಪಿ ಬಂಧನ
ಈ ವೇಳೆ ನರಸಿಂಗರಾವ್ ಕುಲಕರ್ಣಿ, ಪ್ರಭಾಕರ್ ಪಾಟೀಲ್, ಬೂದಯ್ಯ ಸ್ವಾಮಿ, ಪ್ರಭಾಕರ್ ರಾವ್ ಇದ್ದರು.
