ದಾವಣಗೆರೆ | ನರೇಗಾ ಕೆಲಸ, ಗೌರವಯುತ ಕೂಲಿ, ನಿರುದ್ಯೋಗ ಭತ್ಯೆಗೆ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ.

Date:

Advertisements

ನರೇಗಾದಡಿ ನಿರಂತರ ಕೆಲಸ ಹಾಗೂ ಗೌರವಯುತ ಕೂಲಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯತ್ ಎದುರು ಜಿಲ್ಲಾ ಪಂಚಾಯತ್ ಸಿಇಓ, ಸ್ಥಳಕ್ಕಾಗಮಿಸಿ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನೆ ನಡೆಸಿದೆ.

“ದಾವಣಗೆರೆ ಜಿಲ್ಲೆ, ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮದ ನರೇಗಾ ಕೂಲಿ ಕಾರ್ಮಿಕರಿಗೆ ನಿರಂತರ ಕೆಲಸ ಕೊಡುತ್ತಿಲ್ಲ. ಕಾನೂನಿನ ಪ್ರಕಾರ ನಮೂನೆ-6 ಫಾರಂ ಕೊಟ್ಟರೂ ಕೆಲಸ ಕೊಡುತ್ತಿಲ್ಲ. ನಮೂನೆ-6 ಫಾರಂ ಕೊಟ್ಟು 15 ದಿನಗಳಲ್ಲಿ ಕಾನೂನಿನ ಪ್ರಕಾರ ಕೆಲಸ ಕೊಡಬೇಕು, ಇಲ್ಲವಾದರೆ, ಕಾನೂನಿನ ಪ್ರಕಾರ ನಿರುದ್ಯೋಗಿ ಭತ್ಯೆ ಮತ್ತು ಕೂಲಿ ಭತ್ಯೆಗೆ ಫಾರಂ ನೀಡಬೇಕಿದೆ. ಕಳೆದ 04 ವರ್ಷಗಳಿಂದ ಗೌರವಯುತ ಕೂಲಿ ಪಾವತಿಸಿಲ್ಲ. ಕಡಿಮೆ ಕೂಲಿ ಪಾವತಿಸುತ್ತಿದ್ದಾರೆ” ಕೂಲಿ ಕಾರ್ಮಿಕರು ಎಂದು ಆರೋಪಿಸಿದರು.

1001555070
ದೊಣ್ಣೆಹಳ್ಳಿ ಗ್ರಾಮ ಪಂಚಾಯಿತಿ ಎದುರು ನರೇಗಾ ಕೂಲಿ ಕಾರ್ಮಿಕ ಪ್ರತಿಭಟನೆ

“ನರೇಗಾ ಕಾರ್ಮಿಕರ ಸಮಸ್ಯೆ ಗೊತ್ತಿದ್ದರೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಮತ್ತು ಮೇಟಿಗಳಿಗೆ ಗೌರವಯುತ ಕೂಲಿ ಕೊಡುತ್ತಿಲ್ಲ. ಆರು ಕಿ.ಮೀ. ದೂರಕ್ಕೆ ಕಾರ್ಮಿಕರನ್ನು ಕೆಲಸಕ್ಕೆ ಕಳುಹಿಸುತ್ತಿದ್ದು, ಇದುವರೆಗೂ ಪ್ರಯಾಣದ ವೆಚ್ಚ ಹಾಕಿಲ್ಲ. ಮೇಟಿ ಚಾರ್ಜ್ ಕೊಡಲು ಎಸ್ಟಿಮೇಟ್ ನಲ್ಲಿ ಪ್ರಾವಿಜನ್ ಮಾಡದೇ ತೊಂದರೆ ಮಾಡುತ್ತಿದ್ದಾರೆ. ಈ ಮೇಲಿನ ಎಲ್ಲಾ ಸಮಸ್ಯೆಗಳು ಕೂಡಲೇ ಇತ್ಯರ್ಥವಾಗಬೇಕು. ಅಥವಾ ಕೂಡಲೇ ನರೇಗಾ ಕಾನೂನನ್ನು ಉಲ್ಲಂಘಿಸಿ ನಿರ್ಲಕ್ಷ್ಯದಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಬೇಕು. ಕೂಡಲೇ ಕೆಲಸದಿಂದ ವಜಾ ಮಾಡಬೇಕು. ಇಲ್ಲವಾದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಲು ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್‌ ಹೇಳಿದಂತೆ ಭಾರತದಲ್ಲಿ ಸಾಂವಿಧಾನಿಕ ನೈತಿಕತೆ ಸಾಮಾನ್ಯವಾಗಿಲ್ಲ: ಚಿಂತಕ ಶಿವಸುಂದರ್‌

“ದೊಣೆಹಳ್ಳಿ ಗ್ರಾಮ ಪಂಚಾಯಿತಿ, ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿ, ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ, ಮರಿಕುಂಟೆ, ಮಾದನಹಳ್ಳಿ ಹಾಗೂ ಬಿಳಿಚೋಡು ಗ್ರಾಮ ಪಂಚಾಯಿತಿಗಳಲ್ಲಿ ನಿರಂತರ ಕೆಲಸಬೇಕು. ಹಾಗೂ ಗೌರಯುತ ಕೂಲಿಬೇಕು. ದಿದ್ದಿಗಿ ಗ್ರಾಮ ಪಂಚಾಯಿತಿಯಲ್ಲಿ ನಿರಂತರ ಕೆಲಸ, ಪ್ರಯಾಣದ ವೆಚ್ಚ ಕೊಡುವಲ್ಲಿ ಸಮಸ್ಯೆಗಳಿದ್ದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ಥಳಕ್ಕಾಗಮಿಸಿ ಪರಿಹಾರ ಕೊಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗ್ರಾಕೂಸ್ ತಾಲೂಕಿನ ಸಂಚಾಲಕಿ ಸುಧಾ ಪಲ್ಲಾಗಟ್ಟೆ, ನೇತ್ರಾವತಿ, ಬೋರಪ್ಪ, ಮಾಲಾಶ್ರೀ, ಓಬಳೇಶ್, ಶಶಿಕಲಾ, ಲಲಿತಮ್ಮ, ಸವಿತಾ, ಸೋಮಶೇಖರ್, ತಿಪ್ಪೆರುದ್ರಪ್ಪ, ಮಂಜುನಾಥ, ತಿಪ್ಪೇಸ್ವಾಮಿ, ಶಾರದಮ್ಮ, ಜಯಮ್ಮ, ರಾಜಮ್ಮ, ಚೌಡಮ್ಮ, ಏಕಾಂತಮ್ಮ, ಬಸಮ್ಮ, ಸಾಕಮ್ಮ, ಇಂದ್ರಮ್ಮ, ಓಂಕಾರಮ್ಮ, ರತ್ನಮ್ಮ, ಮಂಜುನಾಥ, ಮುಸ್ಷೂರಮ್ಮ ಸೇರಿದಂತೆ ಐವತ್ತಕ್ಕೂ ಹೆಚ್ಚು ಕಾರ್ಮಿಕರು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ಉದ್ಯೋಗ ಮಾಹಿತಿ | ಆತ್ಮ ಯೋಜನೆ: ತಾಂತ್ರಿಕ ವ್ಯವಸ್ಥಾಪಕ ನೇಮಕಾತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X