ಬಿಜೆಪಿ ಶಿಸ್ತು ಸಮಿತಿಯಿಂದ ಯತ್ನಾಳ್‌ಗೆ 2ನೇ ನೋಟಿಸ್

Date:

Advertisements

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಶಿಸ್ತುಸಮಿತಿ ಎರಡನೇ ಬಾರಿಗೆ ಶೋಕಾಸ್ ನೋಟಿಸ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ, ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರೀಯ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ. ತಮ್ಮ ಭರವಸೆ ತಾವೇ ಮುರಿದು ಮತ್ತೆ ಪದೇ ಪದೇ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ಕೊಡುತ್ತಿದ್ದ ಯತ್ನಾಳ್‌ಗೆ ಇಂದು ಎರಡನೇ ಶೋಕಾಸ್ ನೋಟಿಸ್ ಕೊಟ್ಟು ಮತ್ತೆ ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾರೆ.

ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ದೀರಿ. ಮುಂದಿನ ದಿನಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ. ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ. ಪಕ್ಷ ವಿರೋಧ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ಹೀಗಾಗಿ ಈ ಬಗ್ಗೆ 72 ಗಂಟೆಗಳಲ್ಲಿ ಸ್ಪಷ್ಟನೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಇದಕ್ಕೂ ಮುನ್ನ ಕಳೆದ ವರ್ಷದ ಡಿಸೆಂಬರ್ 02 ರಂದು ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಮೊದಲ ಶೋಕಾಸ್ ನೋಟಿಸ್ ನೀಡಿತ್ತು. ಆಗ ಯತ್ನಾಳ್ ಬಹಿರಂಗ ಹೇಳಿಕೆ ಕೊಡುವುದಿಲ್ಲ ಎಂದು ಭರವಸೆ ನೀಡಿ, ಶೋಕಾಸ್ ನೋಟಿಸ್‌ಗೆ ಉತ್ತರಿಸಿದ್ದರು.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಯತ್ನಾಳ್​ ಸಿಡಿದೆದ್ದಿದ್ದು, ಬಹಿರಂಗವಾಗಿಯೇ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಟೀಕೆಗಳನ್ನು ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ಕಳೆದ ವರ್ಷ ಡಿಸೆಂಬರ್‌ನಲ್ಲಿಯೂ ಯತ್ನಾಳ್​ಗೆ ಶಿಸ್ತುಪಾಲನಾ ಸಮಿತಿ ಮೊದಲ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಆದರೆ ನೋಟಿಸ್‌ಗೆ ಯತ್ನಾಳ್​ ಉತ್ತರ ನೀಡದೆ ಖುದ್ದು ಶಿಸ್ತು ಸಮಿತಿ ಮುಂದೆ ಹಾಜರಾಗಿ ವಿವರಣೆ ನೀಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X