ಕುತೂಹಲ ಘಟ್ಟದಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌!

Date:

Advertisements
  • ಆಸ್ಟ್ರೇಲಿಯಾ; 469 ಮತ್ತು270/8 ಡಿಕ್ಲೇರ್‌
  • ಅಂತಿಮ ದಿನ ರೋಹಿತ್‌ ಪಡೆ ಗೆಲುವಿಗೆ 280 ರನ್‌ ಗುರಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯವು ಕುತೂಹಲಕಾರಿ ಘಟ್ಟ ತಲುಪಿದೆ. ಫೈನಲ್‌ ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಭಾರತ, 3 ವಿಕೆಟ್‌ ನಷ್ಟದಲ್ಲಿ 164 ರನ್‌ಗಳಿಸಿದೆ.

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಗೆಲ್ಲಲು ಅಂತಿಮ ದಿನವಾದ ನಾಳೆ (ಭಾನುವಾರ) ರೋಹಿತ್‌ ಪಡೆ, 7 ವಿಕೆಟ್‌ಗಳ ನೆರವಿನಿಂದ 280 ರನ್‌ ಗಳಿಸಬೇಕಾಗಿದೆ. 44 ರನ್‌ಗಳಿಸಿರುವ ವಿರಾಟ್‌ ಕೊಹ್ಲಿ ಮತ್ತು 20 ರನ್‌ಗಳೊಂದಿಗೆ ಅಜಿಂಕ್ಯಾ ರಹಾನೆ ಕ್ರೀಸ್‌ನಲ್ಲಿದ್ದಾರೆ.

444 ರನ್‌ಗಳ ಕಠಿಣ ಗುರಿಯೊಂದಿಗೆ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ್ದ ಭಾರತ ಉತ್ತಮ ಆರಂಭ ಪಡೆದಿತ್ತು. ʻಐಪಿಎಲ್‌ ಹೀರೋʼ ಶುಭಮನ್‌ ಗಿಲ್‌ (18) ನಿರಾಸೆ ಮೂಡಿಸಿದರೂ ಸಹ, ನಾಯಕ ರೋಹಿತ್‌ ಶರ್ಮಾ 43 ರನ್‌ಗಳಿಸುವ ಮೂಲಕ ಬ್ಯಾಟಿಂಗ್‌ ಲಯ ಕಂಡುಕೊಂಡರು. ಅನುಭವಿ ಚೆತೇಶ್ವರ ಪುಜಾರ 27 ರನ್‌ಗಳಿಸಿ ಕ್ಯಾಪ್ಟನ್‌ ಕಮ್ಮಿನ್ಸ್‌ಗೆ ವಿಕೆಟ್‌ ಒಪ್ಪಿಸಿದರು.

Advertisements

ನಾಲ್ಕನೇ ವಿಕೆಟ್‌ಗೆ ಈಗಾಗಲೇ 71 ರನ್‌ಗಳ ಜೊತಯಾಟದಲ್ಲಿ ಭಾಗಿಯಾಗಿರುವ ಕೊಹ್ಲಿ-ರಹಾನೆ ಜೋಡಿ, ಪಂದ್ಯದ ಅಂತಿಮ ದಿನ ಕ್ರೀಸ್‌ನಲ್ಲಿ ನೆಲೆಯೂರಿ ನಿಂತರೆ ಭಾರತ ಚಾಂಪಿಯನ್‌ಶಿಪ್‌ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.

ಆಸ್ಟ್ರೇಲಿಯಾ; ದ್ವಿತೀಯ ಇನ್ನಿಂಗ್ಸ್‌ 270/8 ಡಿಕ್ಲೇರ್‌

ಇದಕ್ಕೂ ಮೊದಲು 4 ವಿಕೆಟ್ ನಷ್ಟದಲ್ಲಿ 123 ರನ್ ಗಳಿಂದ ಮೂರನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾ, ದ್ವಿತೀಯ ಇನ್ನಿಂಗ್ಸ್‌ನಲ್ಲಿ 8 ವಿಕೆಟ್‌ ನಷ್ಟದಲ್ಲಿ 270 ರನ್‌ಗಳಿಸಿದ್ದ ವೇಳೆ ಇನ್ನಿಂಗ್ಸ್‌ ಡಿಕ್ಲೇರ್‌ ಘೋಷಿಸಿತ್ತು. ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಅರ್ಧ ಶತಕ (66*) ಗಳಿಸಿದರೆ, 57 ಎಸೆತಗಳನ್ನು ಎದುರಿಸಿದ ವೇಗಿ ಮಿಚೆಲ್‌ ಸ್ಟಾರ್ಕ್‌ 41 ರನ್‌ಗಳಿಸುವ ಮೂಲಕ ತಂಡದ ಲೀಡ್‌ ಹೆಚ್ಚಿಸಲು ನೆರವಾದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X