ಉಡುಪಿ | ಜಿಲ್ಲೆಗೆ ಸರಕಾರಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜು ಬೇಕು – ಎಸ್ ಡಿಪಿಐ

Date:

Advertisements

2025-26 ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಅನ್ನು ಮಾರ್ಚ್ ತಿಂಗಳಲ್ಲಿ ಸಿದ್ಧರಾಮಯ್ಯ ನವರು ಮಂಡಿಸಲಿದ್ದು ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಪೂರೈಸಲು ಬಜೆಟ್ ನಲ್ಲಿ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ನಝೀರ್ ಅಹಮದ್ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿಯಾದ ನಿಯೋಗ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳಾದ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜುಗಳನ್ನು ನಿರ್ಮಿಸಬೇಕು, ಜಿಲ್ಲೆಯಲ್ಲಿ ಸುಮಾರು ಎಂಟು ಶೇಕಡಾ ದಷ್ಟು ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಪ್ರತಿ ತಾಲೂಕುಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಬೇಕು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ವಸತಿ ಶಾಲೆಗಳನ್ನು ನಿರ್ಮಿಸಬೇಕು, ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು. ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು, ದೇಶದಲ್ಲೇ ಖ್ಯಾತಿಯನ್ನು ಗಳಿಸಿರುವ ಜಿಲ್ಲೆಯ ವಿಶೇಷ ಕೃಷಿಗಳಾದ ಮಟ್ಟು ಗುಳ್ಳ ಹಾಗೂ ಉಡುಪಿ ಮಲ್ಲಿಗೆ ಬೆಳೆಗಳಿಗೆ ಪ್ರೋತ್ಸಾಹ ನೀಡಬೇಕು ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನುದಾನವನ್ನು ಮೀಸಲಿಡಬೇಕು ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಮುಖಂಡರಾದ ಹಸೈನಾರ್ ಕಟಪಾಡಿ, ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಅಶ್ರಫ್ ಬಾವ, ಉಪಾಧ್ಯಕ್ಷರಾದ ರಹೀಮ್ ಆದಿಉಡುಪಿ ಉಪಸ್ಥಿತರಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X