ಹೂಡಿಕೆದಾರರ ಸಮಾವೇಶ | ಸಾಮಾಜಿಕ ಜವಾಬ್ದಾರಿ ನೆನಪಿಸಿದ ಕರವೇ

Date:

Advertisements

ಇವತ್ತಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. 10 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು ಸ್ವಾಗತಿಸುತ್ತೇವೆ. ಆದರೆ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಹೂಡಿಕೆದಾರರಿಗೆ ಇರಬೇಕಾದ ಸಾಮಾಜಿಕ ಜವಾಬ್ದಾರಿಗಳನ್ನು ಮರೆಯುವಂತಿಲ್ಲ” ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಸಿದ್ದಾರೆ.

“ಬಂಡವಾಳ ಹೂಡಿಕೆ, ಉದ್ಯಮಶೀಲತೆಗೆ ಪ್ರೋತ್ಸಾಹ ಎಲ್ಲವೂ ಸರಿಯೇ. ಆದರೆ ಅದು ಈ ನಾಡಿನ ಜನರನ್ನು ಒಳಗೊಳ್ಳದಿದ್ದರೆ ಅದಕ್ಕೆ ಅರ್ಥವಿಲ್ಲ. ಇನ್ವೆಸ್ಟ್ ಕರ್ನಾಟಕದ ಬಹುಪಾಲು ಲಾಭ ಕನ್ನಡಿಗರಿಗೆ ದೊರೆಯುವಂತಾಗಬೇಕು. ಇಲ್ಲವಾದಲ್ಲಿ ಉದ್ಯಮಿಗಳಿಗೆ ರತ್ನಗಂಬಳಿ ಹಾಸಿ ಕರೆಯುವುದರಲ್ಲಿ ಯಾವುದೇ ಪ್ರಯೋಜನವೂ ಇರುವುದಿಲ್ಲ. ಇನ್ವೆಸ್ಟ್ ಕರ್ನಾಟಕದ ಮೂಲಕ ರಾಜ್ಯ, ಹೊರರಾಜ್ಯಗಳಲ್ಲಿ ಇರುವ ಕನ್ನಡಿಗ ಉದ್ಯಮಿಗಳಿಗೆ ಹೆಚ್ಚಿನ ಆದ್ಯತೆ ದೊರೆಯುವಂತಾಗಬೇಕು. ಯಾವುದೇ ಉದ್ಯಮ ಕರ್ನಾಟಕಕ್ಕೆ ಬಂದರೂ ಸಿ ಮತ್ತು ಡಿ ದರ್ಜೆಯ ಎಲ್ಲ ಹುದ್ದೆಗಳು ಕನ್ನಡದ ಮಕ್ಕಳಿಗೆ ದೊರೆಯುವಂತಾಗಬೇಕು. ಇತರ ಹುದ್ದೆಗಳಲ್ಲಿ ಶೇ. 60ರಷ್ಟು ಕನ್ನಡಿಗರಿಗೇ ದೊರೆಯಬೇಕು. ಆಗ ಇಂಥ ಸಮಾವೇಶ ನಿಜವಾದ ಅರ್ಥದಲ್ಲಿ ಯಶಸ್ವಿಯಾಗುತ್ತದೆ. ಕರ್ನಾಟಕ ಎಂದರೆ ಕೇವಲ ಒಂದು ಭೂಭಾಗವಲ್ಲ, ಕರ್ನಾಟಕವೆಂದರೆ ಇಲ್ಲಿನ ಜನರು, ಅವರ ಬದುಕು. ಅದನ್ನು ಸರ್ಕಾರ, ಉದ್ಯಮಿಗಳು ಮರೆಯಬಾರದು” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಹಿಂದೆ ಕರ್ನಾಟಕದಲ್ಲಿ ಬಂಡವಾಳ ಹೂಡಿದವರು ಸರ್ಕಾರ ನೀಡಿದ ಎಲ್ಲ ಸಹಾಯವನ್ನು ಪಡೆದು, ರಿಯಾಯಿತಿ ದರದಲ್ಲಿ ಭೂಮಿ, ತೆರಿಗೆ ರಜೆ, ಕಡಿಮೆ ದರದಲ್ಲಿ ವಿದ್ಯುತ್, ನೀರಿನ ಸೌಲಭ್ಯ ಇತ್ಯಾದಿಗಳನ್ನು ಪಡೆದು ಬೆಳೆದು ನಿಂತವು. ಆದರೆ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಕೇಳಿದಾಗ “ನಾವು ಅರ್ಹತೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತೇವೆ” ಎಂದು ದುರಂಹಕಾರದ ಹೇಳಿಕೆಗಳನ್ನು ನೀಡಿದವು. ಇದು ಕೃತಘ್ನತೆಯ ಪರಮಾವಧಿ ಮಾತ್ರವಲ್ಲ, ಹತ್ತಿದ ಏಣಿಯನ್ನು ಒದೆಯುವ ಅಹಂಕಾರ. ಸ್ಥಳೀಯರಿಗೆ ಉದ್ಯೋಗ ನೀಡುತ್ತೇವೆ ಎಂದು ಲಿಖಿತ ಒಪ್ಪಂದ ಮಾಡಿಕೊಂಡ ಉದ್ಯಮಿಗಳೂ ಕೂಡ ಅದನ್ನು ಪಾಲಿಸಲಿಲ್ಲ.

Advertisements

ಕರ್ನಾಟಕದಲ್ಲಿ ಹೊರರಾಜ್ಯದ ವಲಸೆ ಪ್ರಮಾಣ ಮಿತಿಮೀರಿ ಹೋಗಿರುವ ಈ ಸಂದರ್ಭದಲ್ಲಿ ಹೊಸ ಉದ್ಯಮಗಳಲ್ಲೂ ಹೊರರಾಜ್ಯದವರನ್ನೇ ತುಂಬಿದರೆ ಕರ್ನಾಟಕದ ಚಹರೆಯೇ ಬದಲಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಹೊಸ ಉದ್ಯಮಿಗಳ ಜೊತೆಯಲ್ಲಿ ಬರುವ ಹೊಸ ವಲಸಿಗರ ಸಮಸ್ಯೆಯನ್ನು ನಾವು ಎದುರಿಸಬೇಕಾಗುತ್ತದೆ.

ಉದ್ಯಮಗಳು ಬರಲಿ, ಅದಕ್ಕೆ ನಮ್ಮ ಆಕ್ಷೇಪಣೆಯಿಲ್ಲ. ಆದರೆ ಕರ್ನಾಟಕದ ಸುಂದರ ಪರಿಸರದಲ್ಲಿ, ಎಲ್ಲ ಸವಲತ್ತುಗಳನ್ನು ಪಡೆದು ಉದ್ಯಮ ಕಟ್ಟುವವರು ಕನ್ನಡಿಗರಿಗೇ ಉದ್ಯೋಗ ನೀಡಬೇಕೆಂಬ ಸಾಮಾಜಿಕ ಜವಾಬ್ದಾರಿ ಹೊಂದಿರಬೇಕು. ಈ ಜವಾಬ್ದಾರಿಯನ್ನು ಕಾನೂನುಬದ್ಧವಾಗಿ ಸರ್ಕಾರ ಜಾರಿಗೆ ತರಬೇಕು. ಕರ್ನಾಟಕದ ಅಭಿವೃದ್ಧಿ ಎಂದರೆ ಕನ್ನಡಿಗರ ಅಭಿವೃದ್ಧಿ ಎಂಬುದನ್ನು ಯಾರೂ ಮರೆಯಬಾರದು.

ಕನ್ನಡ, ಕರ್ನಾಟಕ, ಕನ್ನಡಿಗರ ಕುರಿತಾಗಿ ಅಪಾರ ಕಾಳಜಿ ಹೊಂದಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಈ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ನಂಬಿಕೆ. ಕನ್ನಡಿಗರ ಪಾಲಿಗೆ ‘ಇನ್ವೆಸ್ಟ್ ಕರ್ನಾಟಕ’ ಭಾಗ್ಯದ ಬಾಗಿಲು ತೆರೆಯಬೇಕೇ ಹೊರತು ಕನ್ನಡಿಗರನ್ನು ಕರ್ನಾಟಕದಲ್ಲಿ ಅತಂತ್ರರನ್ನಾಗಿ ಮಾಡಬಾರದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X