ಲಾಟರಿ ವಿತರಕರು ಕೇಂದ್ರಕ್ಕೆ ಸೇವಾ ತೆರಿಗೆ ಪಾವತಿಸುವ ಹೊಣೆ ಹೊಂದಿಲ್ಲ: ಸುಪ್ರೀಂ ಕೋರ್ಟ್

Date:

Advertisements

ಲಾಟರಿ ವಿತರಕರು ಕೇಂದ್ರ ಸರ್ಕಾರಕ್ಕೆ ಸೇವಾ ತೆರಿಗೆ ಪಾವತಿಸುವ ಹೊಣೆಯನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಈ ಮೂಲಕ ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸಿಕ್ಕಿಂ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದು, ಈ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್‌ಕೆ ಸಿಂಗ್ ಅವರನ್ನು ಒಳಗೊಂಡ ಪೀಠವು ವಜಾಗೊಳಿಸಿದೆ.

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ನಿರ್ಧಾರ

Advertisements

“ಯಾವುದೇ ಸಂಸ್ಥೆಯೂ ಸಂಬಂಧವಿಲ್ಲದ ಕಾರಣ ಪ್ರತಿವಾದಿಗಳು (ಲಾಟರಿ ವಿತರಕರು) ಸೇವಾ ತೆರಿಗೆ ಪಾವತಿಸಲು ಹೊಣೆಗಾರರಾಗುವುದಿಲ್ಲ. ಆದರೆ ಪ್ರತಿವಾದಿಗಳು ಸಂವಿಧಾನದ ಪ್ರಕಾರವಾಗಿ ರಾಜ್ಯವು ವಿಧಿಸುವ ತೆರಿಗೆಯನ್ನು ಪಾವತಿಸುವುದನ್ನು ಮುಂದುವರಿಸಬೇಕು” ಎಂದು ನ್ಯಾಯಮೂರ್ತಿ ನಾಗರತ್ನ ತೀರ್ಪು ನೀಡುತ್ತಾ ತಿಳಿಸಿದ್ದಾರೆ.

“ಲಾಟರಿ ಟಿಕೆಟ್‌ಗಳ ಖರೀದಿದಾರ ಮತ್ತು ಸಂಸ್ಥೆಯ ನಡುವಿನ ವಹಿವಾಟಿನ ಮೇಲೆ ಸೇವಾ ತೆರಿಗೆ ವಿಧಿಸಲಾಗುವುದಿಲ್ಲ. ಎಲ್ಲಾ ವಾದ ವಿವಾದವನ್ನು ಗಮನಿಸಿದಾಗ ಭಾರತ ಸರ್ಕಾರ ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳಲ್ಲಿ ನಮಗೆ ಯಾವುದೇ ಅರ್ಹತೆ ಕಂಡುಬರುವುದಿಲ್ಲ. ಆದ್ದರಿಂದ ಈ ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ” ಎಂದು ಪೀಠ ಹೇಳಿದೆ.

ಇದನ್ನು ಓದಿದ್ದೀರಾ? ಮೊದಲ ಮದುವೆ ಮುಂದುವರೆದಿದ್ದರೂ, ಮಹಿಳೆ 2ನೇ ಪತಿಯಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್‌

ಸೇವಾ ತೆರಿಗೆ ವಿಧಿಸುವ ಹಕ್ಕು ನಮಗೂ ಇದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಆದರೆ ಸಿಕ್ಕಿಂ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ಲಾಟರಿಗಳ ಮೇಲೆ ತೆರಿಗೆ ವಿಧಿಸುವುದು ರಾಜ್ಯ ಸರ್ಕಾರ ಮಾತ್ರ, ಕೇಂದ್ರ ಸರ್ಕಾರವಲ್ಲ ಎಂದು ಹೇಳಿದೆ.

ಲಾಟರಿ ಸಂಸ್ಥೆ ಫ್ಯೂಚರ್ ಗೇಮಿಂಗ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಸಿಕ್ಕಿಂ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ 2013ರಲ್ಲಿಯೇ ಕೇಂದ್ರ ಸರ್ಕಾರ ಲಾಟರಿ ಮೇಲೆ ಸೇವಾ ತೆರಿಗೆ ವಿಧಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X