ಗುಬ್ಬಿ | ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವ ವಿರೋಧ ಪಕ್ಷ : ಶಾಸಕ ಎಸ್.ಆರ್.ಶ್ರೀನಿವಾಸ್ ಟೀಕೆ

Date:

Advertisements

ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಎಲ್ಲಾ ಶಾಸಕರಿಗೂ ಹತ್ತು ಕೋಟಿ ಅನುದಾನ ನೀಡಿ ಅಬಿವೃದ್ದಿ ಕೆಲಸಕ್ಕೆ ಮುನ್ನುಡಿ ಹಾಡಿದ ಸರ್ಕಾರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸಮರ್ಥಿಸಿಕೊಂಡರು.

ತಾಲ್ಲೂಕಿನ ಮುದಿಗೆರೆ ಗ್ರಾಮದಲ್ಲಿ ಒಟ್ಟು 3 ಕೋಟಿ ರೂಗಳ ನಾಲ್ಕು ಗ್ರಾಮದ ಸಿಸಿ ರಸ್ತೆ ಕಾಮಗಾರಿಗೆ ಸಾಂಕೇತಿಕವಾಗಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಗೂಬೆ ಕೂರಿಸುವ ಕೆಲಸ ಮಾಡುವ ವಿರೋಧ ಪಕ್ಷ ಅಪಾದನೆ ಮಾಡುವುದೇ ದೊಡ್ಡ ಕೆಲಸ ಎಂದು ಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲೇ ಈಗಾಗಲೇ 15 ರಸ್ತೆ ಕಾಮಗಾರಿ ಏಕಕಾಲದಲ್ಲಿ ನಡೆದಿದೆ. ಸಲ್ಲದ ಆರೋಪ ಮಾಡುವುದು ಬಿಟ್ಟು ಅಭಿವೃದ್ದಿ ಕೆಲಸಗಳಿಗೆ ಸಾಥ್ ನೀಡುವುದು ಸೂಕ್ತ ಎಂದು ಟಾಂಗ್ ಕೊಟ್ಟರು.

ಕಳೆದ ಆರು ವರ್ಷಗಳಿಂದ ಬಡವರಿಗೆ ಮನೆ ನಿರ್ಮಾಣಕ್ಕೆ ವಸತಿ ಯೋಜನೆಯ ಕಾರ್ಯಕ್ರಮ ಜಾರಿಯಾಗಿಲ್ಲ. ಈಗ ಸಚಿವರ ಜೊತೆ ಮಾತನಾಡಿ ಮನವಿ ಮಾಡಿದ ಹಿನ್ನಲೆ 4 ಸಾವಿರ ಮನೆಗಳನ್ನು ಫೆಬ್ರವರಿ ಅಂತ್ಯದೊಳಗೆ ಮಂಜೂರು ಮಾಡಲಿದ್ದಾರೆ. ಯೂನಿಟ್ ಬೆಲೆ ಮೊದಲು 1.70 ಲಕ್ಷ ನೀಡುತ್ತಿದ್ದು, ಈಗ ಇದನ್ನು ಪರಿಶೀಲಿಸಿ ಹೆಚ್ಚುವರಿಯಾಗಿ 3 ಲಕ್ಷ ನೀಡುವ ಆದೇಶದ ಜೊತೆ ಮನೆಗಳನ್ನು ನೀಡಲಿದ್ದಾರೆ. ಎಲ್ಲಾ ಗ್ರಾಮ ಪಂಚಾಯಿತಿಗೆ ಮನೆಗಳನ್ನು ಹಂಚಲಾಗುವುದು ಎಂದು ಭರವಸೆ ನೀಡಿದರು.

Advertisements
1001024295

ಸಾಮಾಜಿಕ ಜಾಲತಾಣದಲ್ಲಿ ನನ್ನ ಖಾತೆಗಳು ಯಾವುದೂ ಇಲ್ಲ. ಫೇಸ್ ಬುಕ್, ವಾಟ್ಸಪ್, ಟ್ವಿಟ್ಟರ್ ಹೀಗೆ ಯಾವ ಆ್ಯಪ್ ಬಳಸದ ನಾನು ಯಾವ ಅಧಿಕೃತ ಖಾತೆ ಹೊಂದಿಲ್ಲ. ಸಾಮಾಜಿಕ ಜಾಲತಾಣದ ಬಳಕೆ ಇಲ್ಲದ ಮೇಲೆ ಹೇಗೆ ಬೇರೆಯವರನ್ನು ನಿಂದಿಸಿ ಪೋಸ್ಟ್ ಮಾಡಲು ಸಾಧ್ಯ ಎಂಬ ಪ್ರಶ್ನೆ ಕೇಳಿದ ಶಾಸಕರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ 9 ಕೋಟಿ ಮಂಜೂರು ಅಗಲಿದ್ದು ಅತ್ಯಾಧುನಿಕ ಬಸ್ ಸ್ಟ್ಯಾಂಡ್ ನಿರ್ಮಾಣ ಆಗಲಿದೆ. ಜೊತೆಗೆ 14 ಕೋಟಿ ಬಸ್ ಡಿಪೋ ಕೂಡಾ ನಿರ್ಮಾಣ ಆಗಲಿದೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಬಗ್ಗೆ ಪ್ರಸ್ತಾಪಿಸಿ ಒತ್ತಡ ಕೆಲಸ ಮಾಡುತ್ತಿರುವುದು ಸರಿಯಷ್ಟೇ
ಆದರೆ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿ ಮುಷ್ಕರ ಕೂಡಲೇ ಅಂತ್ಯ ಮಾಡಲಿದೆ ಎಂಬ ವಿಶ್ವಾಸವಿದೆ ಎಂದ ಅವರು ಮುದಿಗೆರೆ ಗ್ರಾಮದಲ್ಲಿ 1.50 ಕೋಟಿ ರೂಗಳ ಸಿಸಿ ರಸ್ತೆ ಹಾಗೂ ಬಾಕ್ಸ್ ಚರಂಡಿ, ಹೇರೂರು ವಸತಿ ಶಾಲೆಯ ರಸ್ತೆಗೆ 25 ಲಕ್ಷ, ರಂಗನಾಥಪುರ ಗ್ರಾಮದಲ್ಲಿ 75 ಲಕ್ಷ ರೂಗಳ ಸಿಸಿ ರಸ್ತೆ ಹಾಗೂ ಎನ್.ನಂದಿಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂಗಳ ಸಿಸಿ ರಸ್ತೆಗೆ ಒಂದು ಚಾಲನೆ ನೀಡಲಾಗಿದೆ. ಹೀಗೆ ಶೀಘ್ರದಲ್ಲಿ ಎಲ್ಲಾ ಗ್ರಾಮಗಳಿಗೆ ರಸ್ತೆ ಸೌಲಭ್ಯ ಒದಗಿಸಲು ಬದ್ಧನಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಂ.ಎಚ್.ಪಟ್ಟಣ ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್, ಸದಸ್ಯರಾದ ಗಂಗಾಧರಯ್ಯ, ಜಯಲಕ್ಷ್ಮಮ್ಮ, ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹಯ್ಯ, ಗುತ್ತಿಗೆದಾರ ಮದುವೆಮನೆ ಕುಮಾರ್, ಪಂಚಾಯತ್ ರಾಜ್ ಎಇಇ ಚಂದ್ರಶೇಖರ್, ಜೆಇ ಗೋಪಿನಾಥ್, ಇಂಜಿನಿಯರ್ ಮಂಜುನಾಥ್, ಪ್ರಭಾರ ಪಿಡಿಓ ಕೆ.ಎಂ.ಶೇಖರ್ ಇತರರು ಇದ್ದರು.

ವರದಿ – ಎಸ್. ಕೆ. ರಾಘವೇಂದ್ರ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X