ಮಂಗಳೂರು ಮಹಾನಗರ ಪಾಲಿಕೆಯಿಂದ ಸಾವಿರಾರು ಕೋಟಿ ರೂಪಾಯಿಳ ಅನುದಾನ ಬಿಡುಗಡೆಯಾಗಿದ್ದರೂ ಬಜಾಲ್ ವಾರ್ಡ್ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ 13 ಸ್ಥಳಗಳಲ್ಲಿ ಭೂಮಿ ಪೂಜೆ ನಡೆದಿತ್ತು, ಆದರೆ ಒಂದು ವರ್ಷ ಕಳೆದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಹೇಳಿದ್ದಾರೆ.
ಬಜಾಲ್ ಜಲ್ಲಿಗುಡ್ಡೆ ಕ್ರಾಸ್ ಬಳಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ, ಯೋಜನೆಗಳ ಸ್ಥಿತಿಯ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿದ ಅವರು, “ಮುಖ್ಯರಸ್ತೆಯ ಅಗಲೀಕರಣ ಮತ್ತು ಕಾಂಕ್ರೀಟಿಕರಣ, ಒಳಚರಂಡಿ ವ್ಯವಸ್ಥೆ, ಜಯನಗರದಿಂದ ಪಕ್ಕಲಡ್ಕಕ್ಕೆ ಸಂಪರ್ಕ ಕಲ್ಪಿಸಬೇಕು” ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
“ಬಜಾಲ್ ವಾರ್ಡ್ನ ಪ್ರಗತಿಯನ್ನು ಪರಿಶೀಲಿಸಲು ಡಿವೈಎಫ್ಐ ನಿರ್ಧರಿಸಿದ ಬಳಿಕ, ರಾತ್ರೋರಾತ್ರಿ ಕಟೌಟ್ಗಳು ತಲೆಯೆತ್ತಿವೆ. ಆದರೆ ಸ್ಥಳೀಯ ಶಾಸಕರು ₹17 ಕೋಟಿ ಅನುದಾನ ಕೇಳುವ ಮೂಲಕ ಸಾರ್ವಜನಿಕರನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಕೀಳುಮಟ್ಟದ ರಾಜಕೀಯ ತಂತ್ರಗಳಿಂದ ನಿವಾಸಿಗಳು ವಿಚಲಿತರಾಗುವುದಿಲ್ಲ. ಬಜಾಲ್ನ ಜಲ್ಲಿಗುಡ್ಡೆಯಲ್ಲಿ ಮುಖ್ಯ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ ಸೇರಿದಂತೆ ಇತರೆ ಮೂಲಸೌಕರ್ಯವನ್ನು ಸುಧಾರಿಸಲು ನಿಗಮವು ಯಾವುದೇ ಹಣವನ್ನು ನಿಗದಿಪಡಿಸಿಲ್ಲ” ಎಂದು ಗಮನಿಸಿದರು.
“ಸ್ಥಳೀಯ ಕಾರ್ಪೊರೇಟರ್ ಮತ್ತು ಶಾಸಕರು ಬಜಾಲ್ ವಾರ್ಡ್ನ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈ ಸಮಸ್ಯೆಗಳು ಬಗೆಹರಿಯುವವರೆಗೂ ಸ್ಥಳೀಯ ಸಂಘಟನೆಗಳ ಬೆಂಬಲದೊಂದಿಗೆ ಡಿವೈಎಫ್ಐ ತನ್ನ ಹೋರಾಟವನ್ನು ಮುಂದುವರಿಸಲಿದೆ” ಎಂದುರು.
ಈ ಸುದ್ದಿ ಓದಿದ್ದೀರಾ? ತುರುವೇಕೆರೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ.ಎಸ್. ನಂಜೇಶ್ ಗೌಡ ಆಯ್ಕೆ
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಸ್ಥಳೀಯ ಜನಪ್ರತಿನಿಧಿಗಳ ನಾಟಕೀಯ ರಾಜಕೀಯ ಶೀಘ್ರದಲ್ಲೇ ಬಯಲಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ” ಎಂದರು.
ಪ್ರತಿಭಟನೆಗೂ ಮುನ್ನ ಜಯನಗರ ಜಲ್ಲಿಗುಡ್ಡೆಯಿಂದ ಜಲ್ಲಿಗುಡ್ಡೆ ಕ್ರಾಸ್ವರೆಗೆ ಮೆರವಣಿಗೆ ನಡೆಯಿತು. ಪ್ರತಿಭಟನೆ ವೇಳೆ ಪಾಲಿಕೆ ಕಾರ್ಯಪಾಲಕ ಅಭಿಯಂತರ ನರೇಶ್ ಶೆಣೈ ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಆಲಿಸಿ, ಮನವಿ ಪತ್ರ ಸ್ವೀಕರಿಸಿ ಸ್ಪಂದಿಸಿದರು.