ಹೆಣ್ಣು ಮಕ್ಕಳ ಅಗೌರವದ ಹೇಳಿಕೆ; ನಟ ಚಿರಂಜೀವಿ ವಿರುದ್ಧ ಆಕ್ರೋಶ

Date:

Advertisements

ಹೆಣ್ಣು ಮಕ್ಕಳ ವಿಚಾರದಲ್ಲಿ ತೆಲುಗು ಚಿತ್ರರಂಗದ ಸ್ಟಾರ್ ನಟ ಚಿರಂಜೀವಿ ಹೊಂದಿರುವ ಧೋರಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹೆಣ್ಣು ಮಕ್ಕಳನ್ನು ಚಿರಂಜೀವಿ ಈಗಲೂ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದ್ದಾರೆ ಎಂದು ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ.

ಇತ್ತೀಚೆಗೆ, ಚಿರಂಜೀವಿ ನೀಡಿರುವ ಹೇಳಿಕೆಯು ಆಕ್ರೋಶ-ಟೀಕೆಗೆ ಗುರಿಯಾಗಿದೆ. ‘ಬ್ರಹ್ಮಾಆನಂದಂ’ ಸಿನಿಮಾದ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಿರಂಜೀವಿ, ತಮ್ಮ ಮಗ, ರಾಮ್‌ಚರಣ್‌ಗೆ ಎರಡನೇ ಮಗುವಾದರೂ ಗಂಡು ಮಗು ಆಗಬೇಕು. ಆ ಮಗುವಿನಿಂದ ನಮ್ಮ ಲೆಗಸಿ ಮುಂದುವರೆಯಬೇಕು” ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿರುವ ಚಿರಂಜೀವಿ, “ನಾನು ಮನೆಯಲ್ಲಿ ಮೊಮ್ಮಕ್ಕಳ ಜೊತೆ ಇದ್ದಾಗ, ಲೇಡಿಸ್ ಹಾಸ್ಟೆಲ್‌ನ ವಾರ್ಡನ್ ಆಗಿದ್ದೀನೇನೋ ಎಂಬಂತೆ ಭಾಸವಾಗುತ್ತದೆ. ಸುತ್ತಲೂ ಹೆಣ್ಣುಮಕ್ಕಳೇ ಇರುತ್ತಾರೆ. ಚರಣ್ ಈ ಬಾರಿ ಒಂದು ಗಂಡು ಮಗು ಬೇಕು ಕಣೋ. ನಮ್ಮ ಲೆಗಸಿ ಮುಂದುವರೆಯಬೇಕು ಎಂಬುದು ನನ್ನ ಕೋರಿಕೆ. ಆದರೆ, ಚರಣ್‌ಗೆ ಮತ್ತೊಂದು ಹೆಣ್ಣು ಮಗು ಆಗುತ್ತದೆಯಾ ಎಂಬ ಭಯವಿದೆ” ಎಂದು ಹೇಳಿದ್ದರು.

Advertisements

ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಬ್ಬ ಸ್ಟಾರ್‌ ನಟ ಹೆಣ್ಣು ಮಕ್ಕಳ ಬಗ್ಗೆ ಎಂಥಹ ಧೋರಣೆ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿದ್ದರೆ ಅವರ ಲೆಗಸಿ ಮುಂದುವರೆಯುವುದಿಲ್ಲವೇ. ಅವರ ವಂಶವನ್ನು ಮುಂದುವರೆಸಲು ಗಂಡೇ ಆಗಬೇಕೇ? ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವವರು, ತಮ್ಮನ್ನ ಫಾಲೋ ಮಾಡುವವರಿಗೆ ಮಾದರಿಯಾಗಿ ಇರಬೇಕಿರುವವರು ಗಂಡು-ಹೆಣ್ಣು ಎಂಬ ಭೇದ ಹೊಂದಿದ್ದರೆ, ಅವರು ಯಾವ ರೀತಿಯ ಮಾದರಿಯಾಗಬಲ್ಲರು.ಸಮಾಜಕ್ಕೆ ಎಂಥಹ ಸಂದೇಶ ನೀಡುವರು ಎಂದು ಟೀಕೆಗಳು ವ್ಯಕ್ತವಾಗಿವೆ.

ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಸಾಧನೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಗಂಡಿಗೆ ಸಮಾನಳಾಗಿ ಗುರುತಿಸಿಕೊಂಡಿದ್ದಾರೆ. ಆದರೂ, ಸ್ಟಾರ್ ನಟನೊಬ್ಬ ಗಂಡು ಅಹಮ್ಮಿಕೆಗೆ ಬಲಿಯಾಗಿರುವುದು ವಿಷಾಧನೀಯ ಎಂದು ಹಲವರು ಆಕ್ರೋಶ ವ್ಯಕ್ತಪಡಿದ್ದಾರೆ.

ಅಂದಹಾಗೆ, ಚಿರಂಜೀವಿ ಅವರ ಪುತ್ರ ರಾಮ್‌ಚರಣ್‌ ಮತ್ತು ಉಪಾಸನಾ ದಂಪತಿಗೆ ಹೆಣ್ಣು ಮಗುವಿದ್ದು, ಆಕೆಗೆ ಕ್ಲಿಂಕಾರ ಎಂದು ಹೆಸರಿಟ್ಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X