ಮುಂಬೈನಲ್ಲಿ ಜಿಬಿಎಸ್ ಸೋಂಕಿಗೆ ಮೊದಲ ಬಲಿ

Date:

Advertisements

ಮುಂಬೈನಲ್ಲಿ ಗಿಲಿಯಾನ್ ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಮೊದಲ ಬಲಿಯಾಗಿದೆ. ನಾಯರ್ ಆಸ್ಪತ್ರೆಯಲ್ಲಿ ಬುಧವಾರ ಜಿಬಿಎಸ್ ಸೋಂಕಿನಿಂದಾಗಿ 53 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಜಿಬಿಎಸ್‌ನಿಂದ ಮೃತಪಟ್ಟವರ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ಆರೋಗ್ಯ ಇಲಾಖೆ ಪ್ರಕಾರ ಫೆಬ್ರವರಿ 11ರವರೆಗೆ ಒಟ್ಟು 192 ಮಂದಿಯಲ್ಲಿ ಶಂಕಿತ ಜಿಬಿಎಸ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 172 ಮಂದಿಯಲ್ಲಿ ಜಿಬಿಎಸ್ ಇರುವುದು ಖಚಿತವಾಗಿದೆ. ಈವರೆಗೆ 7 ಮಂದಿ ಸಾವನ್ನಪ್ಪಿರುವುದಾಗಿ ಖಚಿತಪಡಿಸಿದೆ. ಈಗ ಮುಂಬೈನಲ್ಲಿ ಮತ್ತೋರ್ವ ವ್ಯಕ್ತಿ ಮೃತಪಟ್ಟಿರುವುದರಿಂದಾಗಿ ಜಿಬಿಎಸ್‌ ಸೋಂಕಿಗೆ ಬಲಿಯಾದವರ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಜಿಬಿಎಸ್‌ ವೈರಸ್‌ನಿಂದ ಮೊದಲ ಶಂಕಿತ ಸಾವು; ಪುಣೆಯಲ್ಲಿ 100 ದಾಟಿದ ಪ್ರಕರಣಗಳು

Advertisements

ಹೆಚ್ಚಿನ ಪ್ರಕರಣಗಳು ಪುಣೆ ಆಸುಪಾಸಿನಲ್ಲಿ ದೃಡಪಟ್ಟಿದೆ. ಪುಣೆ ಎಂಸಿ ಪ್ರದೇಶದಲ್ಲಿ ಈವರೆಗೆ 40 ಪ್ರಕರಣಗಳು ದಾಖಲಾಗಿವೆ. ಸಮೀಪದ ಹಳ್ಳಿಗಳಲ್ಲಿ 92 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಿಂಪ್ರಿ ಚಿಂಚ್ವಾಡ್‌ನಲ್ಲಿ 29, ಪುಣೆ ಗ್ರಾಮಾಂತರ ಪ್ರದೇಶದಲ್ಲಿ 28 ಜಿಬಿಎಸ್ ಪ್ರಕರಣಗಳು ದಾಖಲಾಗಿವೆ. ಇತರೆ ಜಿಲ್ಲೆಗಳಲ್ಲಿ ಎಂಟು ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರ ಆರೋಗ್ಯ ಇಲಾಖೆ ಪ್ರಕಾರ 104 ರೋಗಿಗಳು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 50 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 20 ಮಂದಿ ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಹೇಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X