ಮಂಗಳೂರು | ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 1 ವರ್ಷ ಸಜೆ

Date:

Advertisements

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮಂಗಳೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ.

ದೇಶದಲ್ಲಿ ಬಿಎನ್‌ಎಸ್‌ (ಭಾರತೀಯ ನ್ಯಾಯ ಸಂಹಿತೆ) ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದಾಗಿದ್ದು, ಕೇವಲ ಮೂರುವರೆ ತಿಂಗಳಲ್ಲಿ ತೀರ್ಪು ಪ್ರಕಟವಾಗಿದೆ. ಮೆಕ್ಯಾನಿಕ್‌ ಆಗಿ ಕೆಲಸ ಮಾಡಿಕೊಂಡಿದ್ದ 24 ವರ್ಷದ ಯುವಕನೇ ಶಿಕ್ಷೆಗೀಡಾದ ಅಪರಾಧಿ.

2024ರ ಅಕ್ಟೋಬರ್‌ ತಿಂಗಳಿನಲ್ಲಿ ಹಲವು ಬಾರಿ ಬೈಕ್‌ನಿಂದ ಬಂದು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಸೆಕ್ಷನ್‌ 12ರಡಿ ಪೋಕ್ಸೋ ಮತ್ತು ಬಿಎನ್‌ಎಸ್‌ 78ರ ಅಡಿ ಪ್ರಕರಣ ದಾಖಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ 1 ವರ್ಷ ಸಜೆ ಮತ್ತು 10 ಸಾವಿರ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಶಿಕ್ಷೆ ಅನುಭವಿಸಬೇಕು. ಸಂತ್ರಸ್ತ ವಿದ್ಯಾರ್ಥಿನಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X